ಸದನ ಕೋಲಾಹಲ ಎದುರಿಸಲು ಸಜ್ಜು

ನಾಳೆಯಿಂದ ಸಂಸತ್‌ ಮುಂಗಾರು ಅಧಿವೇಶನ

Team Udayavani, Sep 13, 2020, 6:50 AM IST

ಸದನ ಕೋಲಾಹಲ ಎದುರಿಸಲು ಸಜ್ಜು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಈ ಬಾರಿಯ ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಲೋಕಸಭೆ, ರಾಜ್ಯಸಭೆಯ ಕಲಾಪಗಳನ್ನು ಸುಗಮವಾಗಿ, ಶಾಂತಿಯುತವಾಗಿ ನಡೆಸಿಕೊಂಡು ಹೋಗಲು ಸರಕಾರ‌ ಸನ್ನದ್ಧವಾಗಿದ್ದರೂ, ವಿಪಕ್ಷಗಳು ಕೆಲವು ಸೂಕ್ಷ್ಮ ವಿಚಾರಗಳ ಚರ್ಚೆಗಳಲ್ಲಿ ಸರ್ಕಾರ­ವನ್ನು ಇಕ್ಕಟ್ಟಿಗೆ ಸಿಲುಕಿ­ಸಲು ನಿರ್ಧರಿಸಿವೆ. ಆದರೆ, ಅದಕ್ಕೆ ದಿಟ್ಟ ಉತ್ತರ ನೀಡಲು ಕೇಂದ್ರವೂ ಸಜ್ಜಾಗಿದೆ.

ವಿಪಕ್ಷಗಳು ಕೊರೊನಾ ವಿಚಾರದಲ್ಲಿ ಸರಕಾರ‌ ಕೈಗೊಂಡ ನಿರ್ಧಾರಗಳು, ಜಿಡಿಪಿ ಪತನ ಹಾಗೂ ಗಡಿಯಲ್ಲಿ ಚೀನ­ದಿಂದ ಎದುರಿಸುತ್ತಿರುವ ಬಿಕ್ಕಟ್ಟು ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಶ್ನೆಗಳ ಸುರಿಮಳೆ ಸುರಿಸಲು ಕಾಯುತ್ತಿದ್ದರೆ, ಕೇಂದ್ರ ಸರಕಾರ‌ ತಾನು ಇತ್ತೀಚೆಗೆ ಕೈಗೊಂಡಿರುವ 11 ಸುಗ್ರೀವಾಜ್ಞೆಗಳನ್ನು ಎರಡೂ ಸದನಗಳಲ್ಲಿ (ಲೋಕಸಭೆ ಮತ್ತು ರಾಜ್ಯಸಭೆ) ಮಂಡಿಸಿ ಸದನದ ಒಪ್ಪಿಗೆ ಪಡೆಯುವುದಕ್ಕೆ ಪ್ರಥಮ ಆದ್ಯತೆ ನೀಡಿದೆ.

ವಿಪಕ್ಷಗಳನ್ನು ಎದುರಿಸಲು ಬಿಜೆಪಿ ಸನ್ನದ್ಧ
ಅಧಿವೇಶನ ಶುರುವಾಗುತ್ತಿದ್ದಂತೆ ಚೀನ ಬಿಕ್ಕಟ್ಟಿನ ಬಗ್ಗೆ ಸರಕಾರವನ್ನು ಪೇಚಿಗೆ ಸಿಕ್ಕಿಸಲು ವಿಪಕ್ಷಗಳು ರೂಪಿಸಿರುವ ತಂತ್ರಗಾರಿಕೆಯನ್ನು ಸಮರ್ಥವಾಗಿ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಕ್ಷದ ಆಂತರಿಕ ಮೂಲಗಳು, “ಚರ್ಚೆಗೆ ನಾವು ಸಿದ್ಧವಾಗಿದ್ದೇವೆ. ಸದನದಲ್ಲಿ ಯಾವಾಗ ಆ ಚರ್ಚೆ ನಡೆದರೂ ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ. ಗಡಿಯಲ್ಲಿ ನಾವು ಹೇಗೆ ಚೀನಕ್ಕೆ ದಿಟ್ಟತನದ ಉತ್ತರ ನೀಡಿದ್ದೇವೆಯೋ, ಅದೇ ರೀತಿ ಸದನದ ಚರ್ಚೆಗಳನ್ನೂ ದಿಟ್ಟತನದಿಂದ ಎದುರಿಸಲಿದ್ದೇವೆ’ ಎಂದು ಹೇಳಿವೆ.

“ಬಹಿರಂಗ ಚರ್ಚೆ ಬೇಡ’
ಈ ಕುರಿತಂತೆ ಮಾತನಾಡಿರುವ ಸಚಿವರೊಬ್ಬರು, “ನಮ್ಮ ಸರಕಾರ, ಚರ್ಚೆಗಳಿಂದ ಓಡಿಹೋಗುವುದಿಲ್ಲ. ಆದರೆ, ಭಾರತ-ಚೀನ ಗಡಿ ವಿಚಾರ ಅತ್ಯಂತ ಸೂಕ್ಷ್ಮವಾದದ್ದು. ಹಾಗಾಗಿ, ಆ ವಿಚಾರದಲ್ಲಿ ಸರಕಾರ‌ ಯಾವ ಕ್ರಮ ಗಳನ್ನು ಅನುಸರಿಸಲಿದೆ, ಯಾವ ತಂತ್ರಗಾರಿಕೆಯನ್ನು ರೂಪಿಸಲಿದೆ ಎಂಬು ದನ್ನು ಬಹಿರಂಗವಾಗಿ ಚರ್ಚಿಸುವುದು ಸಲ್ಲದು. ಆದರೆ, ಇನ್ನೊಂದು ವಾರ ಅಥವಾ ಕೆಲವೇ ದಿನಗಳಲ್ಲಿ ಗಡಿ ಸಮಸ್ಯೆಯನ್ನು ಇತ್ಯರ್ಥ ಗೊಳಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ.

ಸಭೆಯಲ್ಲಿ ವಿವರಣೆ?
ಸರಕಾರದ ಕೆಲವು ನಂಬಲರ್ಹ ಮೂಲಗಳನ್ನು ಉದ್ದೇಶಿಸಿ ಮಾಡಿರುವ ಆ ವರದಿಯಲ್ಲಿ, “ಸಾಮಾನ್ಯವಾಗಿ ಪ್ರತಿಯೊಂದು ಅಧಿವೇಶನ ಶುರುವಾಗುವ ಮುನ್ನ ಕೇಂದ್ರ ಸರಕಾರ‌ ಸರ್ವಪಕ್ಷಗಳ ಸಭೆ ಕರೆಯುತ್ತದೆ. ಆದರೆ, ಈ ಬಾರಿ ಕೊರೊನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ವ್ಯವಹಾರ ಸಲಹಾ ಸಮಿತಿಯ (ಬಿಎಸಿ) ಸಭೆ ನಡೆಸಲು ಉದ್ದೇಶಿಸಲಾಗಿದೆ. ಆ ಸಭೆಯಲ್ಲಿ ವಿಪಕ್ಷಗಳ ಪ್ರತಿನಿಧಿಗಳು ಮಾತ್ರವೇ ಭಾಗವಹಿಸುವ ನಿರೀಕ್ಷೆಯಿದ್ದು, ಆ ಸಭೆಯಲ್ಲೇ ಭಾರತ-ಚೀನ ಗಡಿ ಪರಿಸ್ಥಿತಿಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಲಾಗು¤ತದೆ. ಅಷ್ಟಾದರೂ, ವಿಪಕ್ಷಗಳ ಪ್ರತಿನಿಧಿಗಳು ದೀರ್ಘ‌ ಸ್ವರೂಪದ ಉತ್ತರ ಬೇಕು ಎಂದಾದರೆ ರಕ್ಷಣಾ ಸಚಿವರಿಂದ ವಿಸ್ತೃತ ಮಾಹಿತಿ ನೀಡಲಾಗುತ್ತದೆ’ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.