ಸಂಸತ್‌ನ ಮುಂಗಾರು ಅಧಿ­ವೇಶನ; ಸದನ ಸಮರಕ್ಕೆ ಕಾಂಗ್ರೆಸ್‌ ಸಜ್ಜು

ಉಪಸಭಾಧ್ಯಕ್ಷ, ಉಪಸಭಾಪತಿ ಸ್ಥಾನಕ್ಕೆ ಜಂಟಿ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ

Team Udayavani, Sep 9, 2020, 6:18 AM IST

parliment

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿ­ವೇಶನ ಸೆ. 14ರಿಂದ ಶುರುವಾಗಲಿದ್ದು, ಸದನದಲ್ಲಿ ಸರಕಾರವನ್ನು ವಿವಿಧ ವಿಚಾರ­ಗಳ ಮೂಲಕ ಎದುರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ರಣತಂತ್ರ ರೂಪಿಸಿದೆ. ಈ ಬಗ್ಗೆ ಮಂಗಳವಾರ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಇತರ ವಿಪಕ್ಷಗಳ ಜತೆಗೂಡಿ ಲೋಕಸಭೆಯಲ್ಲಿ ಉಪ ಸಭಾ­ಧ್ಯಕ್ಷರ ಸ್ಥಾನಕ್ಕೆ ಮತ್ತು ರಾಜ್ಯಸಭೆಯಲ್ಲಿನ ಉಪ ಸಭಾಪತಿ ಸ್ಥಾನಕ್ಕೆ ಜಂಟಿಯಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.

ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿಯೇ ಉಪ ಸಭಾಪತಿ ಹುದ್ದೆಗೆ ಆಯ್ಕೆ ನಡೆಯಬೇಕಾಗಿತ್ತು. ಕೋವಿಡ್ ಹಿನ್ನೆಲೆ ಅಧಿವೇಶನ ಮುಂದೂಡಲಾಗಿತ್ತು. ಲೋಕಸಭೆ, ರಾಜ್ಯಸಭೆ ಉಪ ಸಭಾಧ್ಯಕ್ಷ, ಉಪಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸೆ. 11ರಂದು ಕೊನೆಯ ದಿನ. ಹಲವು ವಿಚಾರಗಳಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಈಗ ಸದನದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸಲು ಅಣಿಯಾಗುತ್ತಿವೆ.

1999ರ ಡಿಸೆಂಬರ್‌ನಲ್ಲಿ ಅಟಲ್‌ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೇರಿದಾಗ ಕಾಂಗ್ರೆಸ್‌ನ ಪಿ.ಎಂ. ಸಯೀದ್‌ ಲೋಕಸಭೆಯ ಉಪಸಭಾಪತಿಯಾಗಿದ್ದರು. 2004ರ ಯುಪಿಎ ಸರಕಾರದ ಅವಧಿಯಲ್ಲಿ ಶಿರೋಮಣಿ ಅಕಾಲಿ ದಳದ ಚರಣ್‌ ಜಿತ್‌ ಸಿಂಗ್‌ ಅತ್ವಾಲ್‌ ಈ ಹುದ್ದೆಗೇರಿದ್ದರು. 2014ರಲ್ಲಿ ಮೋದಿ ನೇತೃತ್ವದ ಎನ್‌ಡಿಎ ಗೆದ್ದ ಸಂದರ್ಭದಲ್ಲಿ ಎಐಎಡಿಎಂಕೆಯ ಡಾ| ಎಂ. ತಂಬಿದೊರೈಗೆ ಉಪಸಭಾಪತಿ ಸ್ಥಾನ ನೀಡಲಾಗಿತ್ತು.

ವಿಧೇಯಕಗಳ ಅಂಗೀಕಾರಕ್ಕೆ ಮುದ್ರಿತ ಮತಪತ್ರ ಬಳಕೆ: ಸಂಸತ್‌ ಅಧಿವೇಶನದಲ್ಲಿ ಮಸೂದೆಗಳ ಅಂಗೀ­ಕಾರಕ್ಕೆ ನಡೆಯಲಿರುವ ಮತದಾನಕ್ಕೆ ಮತಪತ್ರಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು ಇದ್ದಂತೆ ವಿದ್ಯುನ್ಮಾನ ಮತ ವ್ಯವಸ್ಥೆಯನ್ನು ಹಾಲಿ ಅಧಿವೇಶನದಲ್ಲಿ ಬಳಕೆ ಮಾಡದೇ ಇರುವ ನಿರ್ಧಾರಕ್ಕೆ ಬರಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಪ್ರತ್ಯೇಕ ಸಮಯದಲ್ಲಿ ಕಲಾಪ ನಡೆಸಲಿವೆ. ಲೋಕಸಭೆ, ರಾಜ್ಯಸಭೆಯ ಕೊಠಡಿಗಳಲ್ಲಿ ಮತ್ತು ಗ್ಯಾಲರಿಗಳಲ್ಲಿ ಕುಳಿತವರಿಗೆ ಮತದಾನದ ಅಗತ್ಯ ವಿದ್ದಲ್ಲಿ ಮುದ್ರಿತ ಮತಪತ್ರ ನೀಡಲಾಗುತ್ತದೆ. ಅದರಲ್ಲಿ ನಿಗದಿತ ಮಸೂದೆಯ ಪರ ಮತ್ತು ವಿರೋಧ ಎಂಬ ಎರಡು ಆಯ್ಕೆಗಳನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮುದ್ರಿಸ­ಲಾಗಿರುತ್ತದೆ. ವಿದ್ಯುನ್ಮಾನ ಮತ ವ್ಯವಸ್ಥೆಯಲ್ಲಿ 5 ನಿಮಿಷಗಳಲ್ಲೇ ಮತದಾನದ ಫ‌ಲಿತಾಂಶ ಸಿಗುತ್ತಿತ್ತು. ಆದರೆ ಮತಪತ್ರ ಬಳಸಿದರೆ, ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ 30 ನಿಮಿಷಗಳು ಬೇಕಾಗುತ್ತವೆ. ಹಾಲಿ ಅಧಿವೇಶನದಲ್ಲಿ ಕೇಂದ್ರ ಸರಕಾರ 11 ಅಧ್ಯಾದೇಶಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಮುಂದಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.