“ಮೆಕುನು’ ಬೆನ್ನಲ್ಲೇ ರಾಜ್ಯಕ್ಕೆ ಮುಂಗಾರು
Team Udayavani, May 31, 2018, 6:00 AM IST
ನವದೆಹಲಿ: ಮೆಕುನು ಚಂಡಮಾರುತದ ಬೆನ್ನಲ್ಲೇ ಮೂರು ದಿನ ಮೊದಲೇ ಕೇರಳಕ್ಕೆ ಆಗಮಿಸಿರುವ ಮುಂಗಾರು, ಬುಧವಾರ ಕರ್ನಾಟಕವನ್ನೂ ಪ್ರವೇಶಿಸಿದೆ. ಈ ಬಗ್ಗೆ ಸ್ವತಃ ಭಾರತೀಯ ಹವಾಮಾನ ಇಲಾಖೆಯೇ ಹೇಳಿಕೆ ನೀಡಿದ್ದು, ಅರಬ್ಬಿ ಸಮುದ್ರದ ಮೂಲಕ ಕೇರಳ, ಕರಾವಳಿ ಕರ್ನಾಟಕ
ಮತ್ತು ರಾಜ್ಯದ ದಕ್ಷಿಣ ಒಳನಾಡಿಗೆ ಪ್ರವೇಶ ಮಾಡಿದೆ. ಹೀಗಾಗಿಯೇ ಬುಧವಾರ ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.
ಈ ಮಧ್ಯೆ, ಮುಂಗಾರು ಮಳೆಯ ಬಗ್ಗೆ ಮತ್ತೂಮ್ಮೆ ಭಾರತೀಯ ಹವಾಮಾನ ಇಲಾಖೆ ಖುಷಿಯ ಸುದ್ದಿ ನೀಡಿದೆ. ಈ ಬಾರಿ ಮುಂಗಾರು ಕೊರತೆ ಕಾಣಿಸುವುದಿಲ್ಲ. ಸಾಮಾನ್ಯ, ಅಂದರೆ ಶೇ.97 ರಷ್ಟು ಮಳೆಯಾಗಲಿದೆ. ಆದರೆ ದೇಶದ ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಮಾತ್ರ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಹಾ ನಿರ್ದೇಶಕ ಕೆ.ಜೆ. ರಮೇಶ್ ಹೇಳಿದ್ದಾರೆ.
2017ರಲ್ಲಿ ಶೇ.97ರಷ್ಟು ಮಳೆಯಾಗಿದ್ದರೆ, ಈ ವರ್ಷ ಅದಕ್ಕಿಂತ ಹೆಚ್ಚು ಮಳೆಯಾಗಲಿದೆ. ಜುಲೈನಲ್ಲಿ ದೀರ್ಘಾವಧಿ ಸರಾಸರಿ ಆಧಾರದಲ್ಲಿ ಶೇ. 101ರಷ್ಟು ಹಾಗೂ ಆಗಸ್ಟ್ನಲ್ಲಿ ಶೇ.94ರಷ್ಟು ಮಳೆಯಾಗಲಿದೆ. ಸಾಮಾನ್ಯವಾಗಿ ಶೇ 90-96ರಷ್ಟು ಮಳೆಯಾದರೆ ಸರಾಸರಿಗಿಂತ ಕಡಿಮೆ, ಶೇ.90 ಕ್ಕಿಂತ ಕಡಿಮೆ ಇದ್ದರೆ ಮಳೆ ಕೊರತೆ ಹಾಗೂ ಶೇ.96-104ರಷ್ಟು ಮಳೆಯಾದರೆ ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ಈ ಹಿಂದೆ ಶೇ. 97ಕ್ಕಿಂತ ಶೇ.5 ಹೆಚ್ಚು ಅಥವಾ ಕಡಿಮೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿತ್ತು. ಆದರೆ ಈಗಿನ ವರದಿಯಲ್ಲಿ ಈ ದೋಷ ಅಂದಾಜನ್ನು ಶೇ. 4ಕ್ಕೆ ಇಳಿಸಲಾಗಿದೆ. ಅಂದರೆ ಶೇ. 97ಕ್ಕಿಂತ ಶೇ. 4 ಹೆಚ್ಚು ಅಥವಾ ಕಡಿಮೆ ಮಳೆಯಾಗಬಹುದು ಎಂದು ರಮೇಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ