ಬಿಜೆಪಿ ಗೆದ್ದಷ್ಟೂ ಪ್ರತಿಪಕ್ಷಗಳ ದಾಳಿ ತೀವ್ರ: ಪ್ರಧಾನಿ ಮೋದಿ
ಕೇಂದ್ರದ ಸಾಧನೆಯನ್ನು ಜನರಿಗೆ ಮುಟ್ಟಿಸಲು ಸೂಚನೆ
Team Udayavani, Mar 29, 2023, 6:45 AM IST
ನವದೆಹಲಿ: ಬಿಜೆಪಿ ಚುನಾವಣೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದಷ್ಟೂ; ಪ್ರತಿಪಕ್ಷಗಳು ಕೆಸರೆರಚಾಟವನ್ನು ಜಾಸ್ತಿ ಮಾಡುತ್ತಲೇ ಹೋಗುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮೂರು ಈಶಾನ್ಯ ರಾಜ್ಯಗಳಲ್ಲಿ ಚುನಾವಣೆ ನಡೆಯಿತು. ತ್ರಿಪುರಾದಲ್ಲಿ ಸ್ವತಂತ್ರವಾಗಿ, ಮೇಘಾಲಯದಲ್ಲಿ ಮಿತ್ರಪಕ್ಷದೊಂದಿಗೆ ಬಿಜೆಪಿ ಅಧಿಕಾರ ಹಿಡಿಯಿತು. ಇನ್ನು ನಾಗಾಲ್ಯಾಂಡ್ನಲ್ಲಿ ಚುನಾವಣೋತ್ತರ ಮೈತ್ರಿ ಮೂಲಕ ಬಿಜೆಪಿ ಅಧಿಕಾರಕ್ಕೇರಿತು. ಈ ಫಲಿತಾಂಶ ಬಂದ ಮೇಲೆ ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರುವುದು ಜೋರಾಗಿದೆ ಎಂದು ಮೋದಿ ಪ್ರತಿಪಕ್ಷಗಳ ಹೋರಾಟವನ್ನು ವ್ಯಾಖ್ಯಾನಿಸಿದ್ದಾರೆ.
ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು. ಏ.4ರ ಬಿಜೆಪಿ ಸಂಸ್ಥಾಪನಾ ದಿನದಿಂದ ಆರಂಭಿಸಿ, ಏ.14ರ ಅಂಬೇಡ್ಕರ್ ಜನ್ಮದಿನಾಚರಣೆವರೆಗೆ ಸಾಮಾಜಿಕ ನ್ಯಾಯ ಸಪ್ತಾಹ ಆಚರಿಸಬೇಕು. ಮೇ 15ರಿಂದ ಜೂ.15ರವರೆಗೆ ಬಿಜೆಪಿ ಸಂಸದರು ತಮ್ಮ ಕ್ಷೇತ್ರಗಳಲ್ಲಿ ಓಡಾಡಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಬೇಕು ಎಂದು ಮೋದಿ ಸೂಚಿಸಿದ್ದಾರೆ.
ಭೂತಾಯಿಯನ್ನು ಸಂರಕ್ಷಿಸಿ:
ಭೂತಾಯಿಯನ್ನು ಸಂರಕ್ಷಿಸಿ. ಆಕೆ ನಮಗೆ ಮರಗಳು, ಕಾಳುಗಳು, ಇನ್ನಿತರೆ ಸಂಗತಿಗಳ ಮೂಲಕ ಸಹಾಯ ಮಾಡುತ್ತಾಳೆ. ರಾಜಕಾರಣಿಗಳು ರಾಜಕೀಯೇತರ ಸಂಗತಿಗಳಿಗಾಗಿಯೂ ಕೆಲಸ ಮಾಡಬೇಕು. ತಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಬೇಟಿ ಬಚಾವೊ ಆಂದೋಲನ ನಡೆಸಿದ್ದೆ. ಆಗ ಲಿಂಗಾನುಪಾತದಲ್ಲಿ ಉತ್ತಮ ಸಾಧನೆ ಆಯಿತು ಎಂದೂ ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ