ಮೇಯಲ್ಲಿ ಹೆಚ್ಚು ಕೇಸ್‌!


Team Udayavani, Apr 23, 2021, 7:00 AM IST

ಮೇಯಲ್ಲಿ ಹೆಚ್ಚು ಕೇಸ್‌!

ಹೊಸದಿಲ್ಲಿ: ಕೋವಿಡ್ 2ನೇ ಅಲೆ ದೇಶದ ವ್ಯವಸ್ಥೆ ಯನ್ನೇ ತಲೆಕಳಗೆ ಮಾಡಿದೆ. ಅದಕ್ಕೆ ಪೂರಕ ವಾಗಿ ದಿನವಹಿ ಸೋಂಕು ಸಂಖ್ಯೆಯ ಏರಿಕೆಯೂ ಬಿರು ಸಿನಿಂದಲೇ ಸಾಗಿದೆ. ವಿಜ್ಞಾನಿಗಳು ಅಂದಾಜು ಮಾಡಿರುವ ಪ್ರಕಾರ ಮೇ 11-15ರ ವರೆಗೆ ಸಕ್ರಿಯ ಸೋಂಕುಗಳ ಸಂಖ್ಯೆ 33ರಿಂದ 35 ಲಕ್ಷಕ್ಕೇರುವ ಸಾಧ್ಯತೆಗಳು ಇವೆ. ಅಲ್ಲಿಗೆ ಮುಂದಿನ ಮೂರು ವಾರ ಗಳವರೆಗೆ ಸಕ್ರಿಯ ಪ್ರಕರಣಗಳು ಗಣನೀಯ ವಾಗಿ ಹೆಚ್ಚುವ ಸಾಧ್ಯತೆಗಳು ದಟ್ಟವಾಗಿದೆ.

ಕಳೆದ ವರ್ಷ ಸೆ. 17ರಂದು ಒಂದೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷದಷ್ಟಿತ್ತು. ಅದಕ್ಕಿಂತ ಮೂರು ಪಟ್ಟು ಹೆಚ್ಚು ಸಕ್ರಿಯ ಪ್ರಕರಣಗಳು ಮುಂದಿ ನ ತಿಂಗಳ ಮಧ್ಯಭಾಗದಲ್ಲಿಯೇ ಕಂಡು ಬರಲಿವೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

ದಿಲ್ಲಿ, ಹರಿಯಾಣ, ರಾಜಸ್ಥಾನ, ತೆಲಂಗಾಣ ರಾಜ್ಯಗಳಲ್ಲಿ ಏ.25-30ರ ಅವಧಿಯಲ್ಲಿ ಗರಿಷ್ಠ ಪ್ರಮಾ ಣದ ಏರಿಕೆ ಕಂಡುಬರಲಿದೆ. ಕರ್ನಾಟಕ ಮತ್ತು ಪಶ್ಚಿಮ ಬಂಗಾಲದಲ್ಲಿ ಮೇ 1-5ರ ಅವಧಿ ಯಲ್ಲಿ , ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಮೇ 6-10ರ ಅವಧಿಯಲ್ಲಿ ಸೋಂಕು ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ವೇತನಕ್ಕೆ ಕತ್ತರಿ: ಕೋವಿಡ್ ಯಿಂದ ಏರ್ಪಟ್ಟಿರುವ ಆರ್ಥಿಕ ಅಸ್ಥಿರತೆಯನ್ನು ನಿವಾರಿಸಲು ಹಿಮಾಚಲ ಪ್ರದೇಶ ರಾಜ್ಯ ಸರಕಾರ, ಕ್ಲಾಸ್‌ 1 ಹಾಗೂ 2 ಶ್ರೇಣಿಯಲ್ಲಿರುವ ಅಧಿಕಾರಿಗಳ ಎರಡು ದಿನದ ವೇತನಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ. ಇನ್ನು, ಕ್ಲಾಸ್‌ 3 ಮತ್ತು 4ರಲ್ಲಿರುವ ಉದ್ಯೋಗಿಗಳ ಒಂದು ದಿನದ ವೇತನವನ್ನು ಕಡಿತಗೊಳಿಸಲು ತೀರ್ಮಾ ನಿಸಿದೆ. ಅಲ್ಲದೆ ಮುಖ್ಯಮಂತ್ರಿ ಜಿತನ್‌ರಾಮ್‌ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ಒಂದು ತಿಂಗಳ ವೇತನಕ್ಕೂ ಕತ್ತರಿ ಬೀಳಲಿದೆ ಎಂದು ಖುದ್ದು ಮುಖ್ಯಮಂತ್ರಿಗಳೇ ಪ್ರಕಟಿಸಿದ್ದಾರೆ.

300 ಪ್ರಯಾಣಿಕರು ಪರಾರಿ! :

ವಿವಿಧ ರಾಜ್ಯಗಳಿಂದ ಅಸ್ಸಾಂನ ಸಿಲ್ಚಾರ್‌ಗೆ ಆಗಮಿಸಿದ್ದ ಸುಮಾರು 300ಕ್ಕೂ ಹೆಚ್ಚು ಪ್ರಯಾಣಿಕರು, ಕಡ್ಡಾಯ ಕೋವಿಡ್ ಪರೀಕ್ಷೆಗೆ ಒಳಗಾಗದೇ ಪರಾರಿಯಾಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಯಮಗಳಂತೆ, ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರಿಗೆ ನಿಲ್ದಾಣದ ಸಮೀಪವೇ ಇರುವ ಟಿಕೋಲ್‌ ಮಾಡೆಲ್‌ ಆಸ್ಪತ್ರೆಯಲ್ಲಿ ರ್ಯಾಪಿಡ್‌ ಆ್ಯಂಟಿಜೆನ್‌ (ಆರ್‌ಎಟಿ) ಹಾಗೂ ಆರ್‌ಟಿ-ಪಿಸಿಆರ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬುಧವಾರ ಇಲ್ಲಿಗೆ ವಿವಿಧ ರಾಜ್ಯಗಳಿಂದ ಸುಮಾರು 690 ಪ್ರಯಾಣಿಕರು ಬಂದಿಳಿದಿದ್ದರು. ಅವರಲ್ಲಿ ಕೆಲವರು ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳಸಬೇಕಿದ್ದರಿಂದ ಅವರನ್ನು ಪರೀಕ್ಷೆಗೊಳಪಡಿಸದೇ ಕಳುಹಿಸಲಾಯಿತು. ಆದರೆ, ಅಸ್ಸಾಂ ರಾಜ್ಯವನ್ನು ಪ್ರವೇಶಿಸಬೇಕಿದ್ದ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆಗೊಳಪಡುವಂತೆ ಸೂಚಿಸ ಲಾಗಿತ್ತು. ಆದರೆ ಅವರಲ್ಲಿ 189 ಪ್ರಯಾಣಿಕರು ಮಾತ್ರವೇ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಅವರಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಆದರೆ, ಉಳಿದ ಪ್ರಯಾಣಿಕರು ಆಸ್ಪತ್ರೆಗೆ ಬಂದಿಲ್ಲ. ಮಾರ್ಗ ಮಧ್ಯೆಯೇ ಪರಾರಿಯಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ.

24 ಗಂಟೆಗಳಲ್ಲಿ 3.14 ಲಕ್ಷ ಪ್ರಕರಣ! :

ಬುಧವಾರ-ಗುರುವಾರ ನಡುವಿನ 24 ಗಂಟೆಗಳಲ್ಲಿ 3,14,835 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ವಿಶ್ವದ ಯಾವುದೇ ರಾಷ್ಟ್ರದಲ್ಲಿ ದಿನಂಪ್ರತಿ ದಾಖಲಾಗುವ ಪ್ರಕರಣಗಳಿಗಿಂತ ಗರಿಷ್ಠದ್ದಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ದಾಖಲೆಯಲ್ಲಿದೆ. ಸಕ್ರಿಯ ಸೋಂಕಿತರ ಸಂಖ್ಯೆ 22,91,428ಕ್ಕೆ ಏರಿದೆ. ಮಂಗಳವಾರ-ಬುಧವಾರದಂದು ದೇಶದ ನಾನಾ ರಾಜ್ಯಗಳಲ್ಲಿ 2,104 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,84,657ಕ್ಕೆ ಮುಟ್ಟಿದೆ. ಚೇತರಿಕೆ ಪ್ರಮಾಣ ಶೇ.84.46ಕ್ಕೆ ಕುಸಿದಿದೆ. ಸತತ 43ನೇ ದಿನ ಈ ದಾಖಲೆಯ ಏರಿಕೆಯಾಗಿದೆ.

ಹಂತಹಂತವಾಗಿ ಏರಿಕೆ :

ಕಳೆದ ವರ್ಷ, ಆ. 7ರಂದು ಭಾರತದಲ್ಲಿ ಕೊರೊನಾ ಪ್ರಕರಣಗಳು 20 ಲಕ್ಷ ಗಡಿ ದಾಟಿದ್ದವು. ಆ. 23ರಂದು 30 ಲಕ್ಷ ಗಡಿ ದಾಟಿದರೆ, ಸೆ. 5ರಂದು 40 ಲಕ್ಷ ಹಾಗೂ ಸೆ. 28ರಂದು 60 ಲಕ್ಷ ಗಡಿ ದಾಟಿದ್ದವು. ಡಿ. 19ರಂದು 1 ಕೋಟಿ ಗೆರೆಯನ್ನು ದಾಟಿದ್ದವು. ಈ ವರ್ಷ ಎ. 19ರಂದು ಪ್ರಕರಣಗಳ ಸಂಖ್ಯೆ 1.50 ಕೋಟಿ ದಾಟಿದೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.