ಕೋವಿಡ್-19ಗೆ ತುತ್ತಾದ ಹಲವಾರು ಜನರು ಗುಣಮುಖರಾಗಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ: WHO
Team Udayavani, Mar 28, 2020, 8:00 AM IST
ವಾಷಿಂಗ್ಟನ್: ಕೋವಿಡ್-19 ಸೋಂಕಿತರ ಸಂಖ್ಯೆ ಪ್ರಪಂಚದಾದ್ಯಂತ ಪ್ರತಿದಿನ ಏರುಗತಿಯಲ್ಲಿ ಸಾಗುತ್ತಿದ್ದು, ಈ ಸಾಂಕ್ರಾಮಿಕ ರೋಗವು ಹಲವು ದೇಶಗಳನ್ನು ಸ್ತಬ್ಧಗೊಳಿಸಿದೆ. ಇದು ಯಾವಾಗ ಮತ್ತು ಹೇಗೆ ಕೊನೆಗೊಳ್ಳುತ್ತದೆ ಎಂಬುದರ ಬಗ್ಗೆ ಯಾವುದೇ ಊಹೆ ಇಲ್ಲದಿದ್ದರೂ, ನಡೆಯುತ್ತಿರುವ ಆರೋಗ್ಯ ತುರ್ತು ಸನ್ನಿವೇಶದ ಏಕೈಕ ಸಕಾರಾತ್ಮಕ ಅಂಶವೆಂದರೆ ಸೋಂಕಿಗೆ ತುತ್ತಾದ ಹಲವಾರು ಜನರು ಚೇತರಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಶುಕ್ರವಾರ ತಿಳಿಸಿದ್ದಾರೆ.
ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಜನರು ಈ ಮಾರಕ ವೈರಸ್ ನಿಂದ ಗುಣಮುಖರಾಗಿದ್ದಾರೆ ಎಂಬುದು ನೆನಪಿಟ್ಟುಕೊಳ್ಳಬೇಕು. ಆದರೇ 5 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಮತ್ತು 21 ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ . ಇದು ದುರಂತದ ವಿಚಾರ ಎಂದು ಅವರು ತಿಳಿಸಿದರು.
ಜಗತ್ತಿನ ಜನರು ಈ ಸೋಂಕಿನ ವಿರುದ್ಧವಾಗಿ ಅತ್ಯಗತ್ಯವಾಗಿ ಹೋರಾಡಬೇಕು, ಯಾವುದೇ ದೇಶವು ಏಕಾಂಗಿಯಾಗಿ ಜಯಿಸಲು ಸಾಧ್ಯವಾಗುವುದಿಲ್ಲ. ವೈರಸ್ ಗೆ ಸಮರ್ಪಕವಾದ ಔಷಧಿ ಸಿಗುವವರೆಗೂ ಹೋರಾಟ ಅನಿವಾರ್ಯ. ಆ ಮೂಲಕ ನಾವು ಮುಂದಿನ ಪೀಳಿಗೆಗೆ ಒಂದು ಭರವಸೆಯನ್ನು ತುಂಬಬೇಕು ಎಂದು ಟೆಡ್ರೋಸ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್