ರಾಮಮಂದಿರ ಪರ ಶಿಯಾ ವಕ್ಫ್ ಮಂಡಳಿ ಒಲವು; ಸುಪ್ರೀಂಗೆ ಅಫಿಡವಿಟ್
Team Udayavani, Aug 8, 2017, 4:53 PM IST
ನವದೆಹಲಿ: ಮಹತ್ವದ ಬೆಳವಣಿಗೆ ಎಂಬಂತೆ ವಿವಾದಿತ ರಾಮಜನ್ಮಭೂಮಿ ಸ್ಥಳದಿಂದ ದೂರದಲ್ಲಿ ಅಥವಾ ಮುಸ್ಲಿಮ್ ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಬಾಬ್ರಿ ಮಸೀದಿಯನ್ನು ನಿರ್ಮಿಸಲಾಗುವುದು ಎಂದು ಉತ್ತರಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿ ಮಂಗಳವಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದೆ.
ರಾಮ ಜನ್ಮಭೂಮಿ ವಿವಾದ ಪ್ರಕರಣ ಇತ್ಯರ್ಥಕ್ಕೆ ತ್ರಿಸದಸ್ಯ ನ್ಯಾಯಪೀಠವನ್ನು ಸುಪ್ರೀಂ ಕೋರ್ಟ್ ಸೋಮವಾರವಷ್ಟೇ ರಚನೆ ಮಾಡಿದ ಬೆನ್ನಲ್ಲೇ ಶಿಯಾ ವಕ್ಫ್ ಮಂಡಳಿ ಈ ಅಫಿಟವಿತ್ ಸಲ್ಲಿಸಿದೆ.
ಎಎನ್ ಐ ವರದಿ ಪ್ರಕಾರ, ಅಯೋಧ್ಯೆಯಲ್ಲಿರುವ ಶ್ರೀರಾಮನ ಜನ್ಮಸ್ಥಳದಿಂದ ದೂರದಲ್ಲಿ ಮುಸ್ಲಿಮ್ ಬಾಹುಳ್ಯ ಇರುವ ಪ್ರದೇಶದಲ್ಲಿ ಮಸೀದಿಯನ್ನು ನಿರ್ಮಿಸಲಾಗುವುದು ಎಂದು ಮಂಡಳಿ ಅಫಿಡವಿಟ್ ನಲ್ಲಿ ತಿಳಿಸಿರುವುದಾಗಿ ವರದಿ ಮಾಡಿದೆ.
ಅಲ್ಲದೇ ಬಾಬ್ರಿ ಮಸೀದಿ ಶಿಯಾ ವಕ್ಫ್ ಆಸ್ತಿಯಾಗಿದೆ. ಪರಸ್ಪರ ಸೌಹಾರ್ದತಯುತವಾಗಿ ಸಂಧಾನದ ಮೂಲಕವೇ ವಿವಾದವನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಹಾಗಾಗಿ ವಿವಾದವನ್ನು ಹೊಂದಾಣಿಕೆ ಮೂಲಕ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲು ಸುಪ್ರೀಂ ಪೀಠದಲ್ಲಿ ಮಂಡಳಿ ಕಾಲಾವಕಾಶವನ್ನು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು