ಭಾರತದ ವಾಯುಪಡೆ ದಾಳಿಗೆ ಉಗ್ರ ಅಜರ್ ಮಸೂದ್ ಬಲಿ ?
Team Udayavani, Mar 3, 2019, 11:42 AM IST
ಹೊಸದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದ ಬಾಲಾಕೋಟ್ ನಲ್ಲಿ ನಡೆಯುತ್ತಿದ್ದ ಉಗ್ರ ಶಿಬಿರ ಮೇಲೆ ಮಂಗಳವಾರ ಭಾರತದ ವಾಯುಪಡೆ ನಡೆಸಿದ ಏರ್ ಸ್ಟ್ರೈಕ್ ನಲ್ಲಿ ಕುಖ್ಯಾತ ಉಗ್ರ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮೌಲಾನಾ ಮಸೂದ್ ಅಜರ್ ಬಲಿಯಾಗಿರುವುದಾಗಿ ಮಾಧ್ಯಮವೊಂದರ ವರದಿ ತಿಳಿಸಿದೆ
ಪಠಾಣ್ ಕೋಟ್, ಉರಿ, ಪುಲ್ವಾಮದಲ್ಲಿ ಮಾರಣಹೋಮ ನಡೆಸಿದ್ದ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಬಾಲಾಕೋಟ್ ನಲ್ಲಿ ಭಾರತೀಯ ವಾಯುಪಡೆ ನಡೆಸಿದ ದಾಳಿಯಲ್ಲಿ ಸತ್ತು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆಯಾದರೂ ಇನ್ನೂ ಖಚಿತವಾಗಿಲ್ಲ.
ಕೆಲ ಮೂಲಗಳ ಮಾಹಿತಿಯ ಪ್ರಕಾರ, ದಾಳಿ ನಡೆದಾಗ ಅಜರ್ ಮಸೂದ್ ಮತ್ತು ಐಎಸ್ ಐ ನ ಉನ್ನತ ಶ್ರೇಣಿಯ ಅಧಿಕಾರಿ ಕರ್ನಲ್ ಸಲೀಂ ಇಬ್ಬರೂ ಬಾಲಾಕೋಟ್ ಉಗ್ರ ನೆಲೆಯಲ್ಲಿ ಇದ್ದರು ಎನ್ನಲಾಗಿದೆ. ಭಾರತೀಯ ವಾಯುಪಡೆ ದಾಳಿಯಿಂದಾಗಿ ಅಜರ್ ಮಸೂದ್ ಮತ್ತು ಕರ್ನಲ್ ಸಲೀಂ ತೀವ್ರ ಗಾಯಗೊಂಡಿದ್ದು, ಶೀಘ್ರವೇ ಅವರಿಬ್ಬರನ್ನೂ ಸೇನಾ ಆಸ್ಪತ್ರೆಗೆ ಸೇರಿಸಲಾಗಿತ್ತು.
ಅವರಲ್ಲಿ ಕರ್ನಲ್ ಸಲೀಂ ಆಗಲೇ ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಶನಿವಾರ ಅಂದರೆ ಮಾರ್ಚ್ ಎರಡರಂದು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.
‘ಬಾಲಾಕೋಟ್ ದಾಳಿಯ ಸ್ಥಳವನ್ನು ಪಾಕಿಸ್ಥಾನ ಸೇನೆ ತಕ್ಷಣವೇ ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಸ್ಥಳೀಯ ಪೊಲೀಸರಿಗೆ ಕೂಡಾ ದಾಳಿ ನಡೆದ ಸ್ಥಳಕ್ಕೆ ಹೋಗಲು ಅವಕಾಶ ನೀಡಿರಲಿಲ್ಲ. ಆ ಸ್ಥಳದಿಂದ ಸುಮಾರು 35 ಹೆಣಗಳನ್ನು ಸಾಗಿಸುವುದನ್ನು ನಾನು ನೋಡಿದ್ದೇನೆ’ ಎಂದು ಪ್ರತ್ಯಕ್ಷದರ್ಶಿಯೋರ್ವ ಪತ್ರಿಕೆಯೊಂದಕ್ಕೆ ಮಾಹಿತಿ ನೀಡಿದ್ದಾನೆ.
ಆದರೆ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ಎರಡು ದಿನಗಳ ನಂತರ ಮಸೂದ್ ಅಜರ್ ಮೂತ್ರ ಪಿಂಡದ ವೈಫಲ್ಯದಿಂದ ರಾವಲ್ಪಿಂಡಿ ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪಾಕಿಸ್ಥಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಹೇಳಿಕೆ ನೀಡಿದ್ದರು. ಏರ್ ಸ್ಟ್ರೈಕ್ ನಲ್ಲಿ ಮಸೂದ್ ಅಜರ್ ಹತನಾಗಿರುವ ವಿಚಾರವನ್ನು ಮರೆಮಾಚಲು ಪಾಕಿಸ್ಥಾನ ಈ ರೀತಿ ಹೇಳಿಕೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil