ಮಧ್ಯಪ್ರದೇಶದಲ್ಲಿ ‘ಕೈ’ಗೆ ಅಧಿಕಾರದ ಬಲ
Team Udayavani, Dec 11, 2018, 11:43 PM IST
ಭೋಪಾಲ್: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೊಂದು ತಾರ್ಕಿಕ ಅಂತ್ಯ ಲಭಿಸಿದೆ. ಅಧಿಕಾರರೂಢ ಭಾರತೀಯ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ನಡುವೆ ಕತ್ತು-ಕತ್ತಿನ ಸ್ಪರ್ಧೆಗೆ ಸಾಕ್ಷಿಯಾದ ಈ ಕಣದಲ್ಲಿ ಅಂತಿಮವಾಗಿ ಕಾಂಗ್ರೆಸ್ ಗೆಲುವಿನ ನಗು ಬೀರುವಲ್ಲಿ ಯಶಸ್ವಿಯಾಗಿದೆ.
ತಡರಾತ್ರಿವರೆಗೆ ಸಾಗುತ್ತಿರುವ ಮತೆಣಿಕೆ ಪ್ರಕ್ರಿಯೆಯಲ್ಲಿ ಬಿ.ಜೆ.ಪಿ.ಗಿಂತ ಅಲ್ಪ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಈ ರಾಜ್ಯದಲ್ಲಿ ಸರಳ ಬಹುಮತವನ್ನು ಪಡೆದು ಅಧಿಕಾರದ ಗದ್ದುಗೆ ಏರುವತ್ತ ಹೆಜ್ಜೆಯಿಟ್ಟಿದೆ. ಸ್ಪಷ್ಟ ಫಲಿತಾಂಶ ಇನ್ನೂ ಲಭಿಸಿಲ್ಲವಾದರೂ ಒಟ್ಟಾರೆಯಾಗಿ 230 ಸದಸ್ಯಬಲದ ಮ.ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದ್ಯಕ್ಕೆ 118 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಸರಳ ಬಹುಮತಕ್ಕಿಂತ 2 ಸ್ಥಾನಗಳ ಹೆಚ್ಚಿನ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಗೆ ಭರ್ಜರಿ ಫೈಟ್ ನೀಡಿದ ಬಿ.ಜೆ.ಪಿ. ಒಟ್ಟಾರೆಯಾಗಿ 105 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತರರು 07 ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಇದೀಗ ಮೇಲ್ನೋಟಕ್ಕೆ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಸರಕಾರ ರಚಿಸುವ ಸಾಧ್ಯತೆಯೇ ಹೆಚ್ಚಾಗಿ ಕಾಣಿಸುತ್ತಿದ್ದು, ಬುಧವಾರ ಹೊತ್ತಿಗೆ ಸ್ಪಷ್ಟ ಚಿತ್ರಣ ಲಭಿಸುವ ಸಾಧ್ಯತೆಗಳಿವೆ. ಈ ಮೂಲಕ ಹ್ಯಾಟ್ರಿಕ್ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಗಳು ನಿಚ್ಚಳವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ