ಮಧ್ಯ ಪ್ರದೇಶ ಬಿಜೆಪಿ ನಾಯಕನ ಹತ್ಯೆ: ಬಿಜೆಪಿ ಕಾರ್ಯಕರ್ತ ಅರೆಸ್ಟ್
Team Udayavani, Jan 19, 2019, 10:01 AM IST
ಪ್ರತಾಪಗಢ, ರಾಜಸ್ಥಾನ : ಮಧ್ಯ ಪ್ರದೇಶದ ಬಿಜೆಪಿ ನಾಯಕ ಪ್ರಹ್ಲಾದ ಬಂಧ್ವಾರ್ ಅವರ ಕೊಲೆ ಕೇಸಿಗೆ ಸಂಬಂಧಪಟ್ಟು ಪೊಲೀಸರು ಇಂದು ಶನಿವಾರ ಬೆಳಗ್ಗೆ ಮುಖ್ಯ ಆರೋಪಿ ಮನೀಶ್ ಬೈರಾಗಿ ಎಂಬಾತನನ್ನು ರಾಜಸ್ಥಾನದ ಪ್ರತಾಪಗಢ ದಲ್ಲಿ ಬಂಧಿಸಿದ್ದಾರೆ. ಬಂಧಿತ ಕೊಲೆ ಆರೋಪಿ ಬೈರಾಗಿ ಓರ್ವ ಬಿಜೆಪಿ ಕಾರ್ಯಕರ್ತನೇ ಆಗಿದ್ದಾನೆ.
ಕಳೆದ ಗುರುವಾರ ಬಂಧ್ವಾರ್ ಅವರನ್ನು (ಇವರು ಮಾಂಡ್ಸೋರ್ ಮುನಿಸಿಪಲ್ ಕಾರ್ಪೊರೇಶನ್ ಅಧ್ಯಕ್ಷರು) ಮಾಂಡ್ಸೋರ್ನ ನಯೀ ಅಬಾದಿ ಯಲ್ಲಿ ಗುಂಡಿಟ್ಟು ಕೊಲ್ಲಲಾಗಿತ್ತು.
ಘಟನೆ ನಡೆದ ತತ್ಕ್ಷಣವೇ ಮಾಂಡ್ಸೋರ್ನಲ್ಲಿ ಕೇಸು ದಾಖಲಿಸಲಾಗಿತ್ತು. ಅದಾಗಿ ಕೆಲವೇ ತಾಸುಗಳಲ್ಲಿ ಪೊಲೀಸರು ಬೈರಾಗಿಯೇ ಕೊಲೆಗಾರನೆಂದು ಕಂಡುಕೊಂಡಿದ್ದರು ಮತ್ತು ಆತನ ಬಂಧನಕ್ಕೆ ಪೊಲೀಸ್ ತಂಡವನ್ನು ರಚಿಸಲಾಗಿತ್ತು.
ಬಂಧ್ವಾರ ಅವರನ್ನು ಬೈರಾಗಿ ಕೊಲ್ಲಲು ಕಾರಣವೇನೆಂಬುದು ತತ್ಕ್ಷಣಕ್ಕೆ ಗೊತ್ತಾಗಿಲ್ಲವಾದರೂ ಭೂವಿವಾದವೇ ಕೃತ್ಯಕ್ಕೆ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ