ಆಫ್ ಲೈನ್ ಪರೀಕ್ಷೆಗೆ ಹೆದರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Feb 23, 2022, 3:29 PM IST
ಛತ್ತರ್ಪುರ: ಶಾಲೆಯಲ್ಲಿ ಆಫ್ಲೈನ್ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೆ ಒಳಗಾಗಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ ನಗರದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
17 ವರ್ಷದ ವಿದ್ಯಾರ್ಥಿ ಹನುಮಾನ್ ಟೋರಿಯಾ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ ಅನುಪ್ ಯಾದವ್ ಹೇಳಿದ್ದಾರೆ.
ಸರ್ಕಾರಿ ಶಾಲೆಯೊಂದರಲ್ಲಿ ಓದುತ್ತಿದ್ದ ಬಾಲಕನಿಗೆ ಮಂಗಳವಾರ ಗಣಿತ ಪರೀಕ್ಷೆ ಇತ್ತು. ಮನೆಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದ. ಪರೀಕ್ಷೆಯ ದಿನ ಓದಲು ಎದ್ದೇಳಲು ಬೆಳಿಗ್ಗೆ 5 ಗಂಟೆಗೆ ಅಲಾರಂ ಇಟ್ಟಿದ್ದರು ಎಂದು ಅವರ ಚಿಕ್ಕಪ್ಪ ಅನುಪಮ್ ತಾಮ್ರಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ಗಲಾಟೆಗೂ ಶಿವಮೊಗ್ಗ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ: ಕುಮಾರಸ್ವಾಮಿ
ಬೆಳಿಗ್ಗೆ ಅಲಾರಾಂ ಆಗುತ್ತಿದ್ದಾಗ, ಹುಡುಗನ ಮನೆಯವರು ಕೋಣೆಗೆ ಹೋಗಿ ನೋಡಿದಾಗ ಅವನು ಸೀಲಿಂಗ್ಗೆ ಫ್ಯಾನ್ಗೆ ನೇಣು ಹಾಕಿಕೊಂಡಿದ್ದನು ಎಂದು ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನ್ಲೈನ್ ಕ್ಲಾಸ್ ಮೂಲಕ ತರಗತಿಗೆ ಹಾಜರಾಗುತ್ತಿದ್ದನು. ಆದರೆ ಈಗ ಆಫ್ಲೈನ್ ತರಗತಿಗೆ ಹಾಜರಾಗಲು ಸೂಚಿಸಲಾಗಿತ್ತು. ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆಯಿಂದಾಗಿ ಬಾಲಕ ಖಿನ್ನತೆಗೆ ಒಳಗಾಗಿದ್ದ ಎಂದು ಬಾಲಕನ ತಂದೆ ಅಮಿತ್ ತಾಮ್ರಕರ್ ಹೇಳಿದ್ದಾರೆ.
ಘಟನೆ ಕುರಿತು ಸಂಪೂರ್ಣವಾಗಿ ಮಾಹಿತಿ ಕಲೆ ಹಾಕುತ್ತಿದ್ದೇವೆ. ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ