MP; ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಆರೋಪಿ ಬಂಧನ
Team Udayavani, Aug 14, 2023, 2:16 PM IST
ಭೋಪಾಲ್: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದ ನಂತರ ಗಾಜಿನ ಕಿಟಕಿಗೆ ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಫಿರೋಜ್ ಖಾನ್ (20) ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ ಮತ್ತು ರೈಲ್ವೇ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾನ್ಮೋರ್ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಈ ಸಂಬಂಧ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಒಬ್ಬನನ್ನು ಬಂಧಿಸಿದೆ ಎಂದು ಅವರು ತಿಳಿಸಿದ್ದಾರೆ.
ವಂದೇ ಭಾರತ್ ರೈಲಿನ ಕಿಟಕಿಗೆ ಹಾನಿಯಾಗಿದ್ದು, ಘಟನೆಯು ಪ್ರಯಾಣಿಕರಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಗ್ವಾಲಿಯರ್ನ ಆರ್ಪಿಎಫ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ಆರ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ