ವೈದ್ಯರಿಗೆ ಹೊಡೆದವರಿಗೆ ಆರೋಗ್ಯ ಖಾತೆ ನೀಡಿ:ತಿವಾರಿ ಟ್ವೀಟ್
Team Udayavani, Sep 3, 2017, 10:18 AM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಸಂಪುಟ ವಿಸ್ತರಣೆ ಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಕುರಿತು ಕಾಂಗ್ರೆಸ್ ನಾಯಕ ಮನೀಷ್ ತಿವಾರಿ ವ್ಯಂಗ್ಯವಾಡಿದ್ದು, ‘ ವೈದ್ಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಸಂಸದರಿಗೆ ಮೋದಿ ಅವರು ಆರೋಗ್ಯ ಖಾತೆ ಕೊಡಬಹುದು’ಎಂದು ಟ್ವೀಟ್ ಮಾಡಿದ್ದಾರೆ.
ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಬಲ ಹಿಂದುತ್ವ ಪ್ರತಿಪಾದಕ,ಉತ್ತರ ಕನ್ನಡದಿಂದ 5 ಬಾರಿ ಸಂಸದ ರಾಗಿ ಆಯ್ಕೆಯಾಗಿರುವ ಅನಂತ್ ಕುಮಾರ್ ಹೆಗಡೆ ಸಚಿವರಾಗುತ್ತಿದ್ದಾರೆ.
ಜನವರಿ ತಿಂಗಳಿನಲ್ಲಿ ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೆ ತಾಯಿಯನ್ನು ಚಿಕಿತ್ಸೆಗೆ ಕರೆದೊಯ್ದ ವೇಳೆ ವೈದ್ಯರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆಕ್ರೋಶಗೊಂಡಿದ್ದ ಅನಂತ್ ಕುಮಾರ್ ಇಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ವೈದ್ಯರ ತುಟಿ ಒಡೆದು ರಕ್ತವೂ ಹೊರ ಬಂದಿತ್ತು. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ