ವ್ಯಕ್ತಿಯ ಸಾವಿನ ರಹಸ್ಯ ಭೇಧಿಸಲು ಹೊರಟ ಪೊಲೀಸರಿಗೆ ಶಾಕ್: ಬಯಲಾಯ್ತು ಮಹಿಳೆಯ ಖತರ್ನಾಕ್ ಕೆಲಸ
Team Udayavani, May 30, 2021, 11:52 AM IST
ಮಧ್ಯಪ್ರದೇಶ: ಭೂಪಾಲ್ ನಲ್ಲಿ ವಾಸಿಸುತ್ತಿರುವ ಮಹಿಳೆಯೊಬ್ಬಳು, ಐದು ವರ್ಷಗಳ ಹಿಂದೆ ತಾನು ಗಂಡನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರೆದುರು ತಪ್ಪೊಪ್ಪಿಕೊಂಡಿದ್ದಾಳೆ.
ವ್ಯಕ್ತಿಯೊಬ್ಬನ ಸಾವಿನ ರಹಸ್ಯವನ್ನು ಭೇಧಿಸಲು ಹೊರಟ ಪೊಲೀಸರಿಗೆ, ಮತ್ತೊಂದು ಕೊಲೆಯ ಮಾಹಿತಿ ದೊರೆತಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆಯ ವಿವರ: ಐದು ವರ್ಷಗಳ ಹಿಂದೆ ಮಹಿಳೆಯೊಬ್ಬಳು ಮೈದುನ ಮೋಹನ್ ಜೊತೆಗೂಡಿ ಗಂಡನನ್ನೇ ಕೊಲೆ ಮಾಡಿದ್ದಳು. ಮಾತ್ರವಲ್ಲದೆ ಮನೆಯಲ್ಲಿಯೇ ಗುಂಡಿ ತೆಗೆದು ಶವವನ್ನು ಹೂತಿದ್ದರು. ಬಳಿಕ ಮಹಿಳೆಯು ತನ್ನ ಮಗ ಹಾಗೂ ಮೋಹನ್ ನ ಜೊತೆಗೂಡಿ ವಾಸಿಸುತ್ತಿದ್ದಳು.
ಇದನ್ನೂ ಓದಿ: 1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!
ಆದರೇ ಗಂಡನ ಹತ್ಯೆ ಮಾಡಿ 5 ವರ್ಷಗಳ ಬಳಿಕ ಮೋಹನನೊಂದಿಗೆ ಕಲಹವೇರ್ಪಟ್ಟಿದೆ. ಇದು ವಿಕೋಪಕ್ಕೆ ತಿರುಗಿ ಮಹಿಳೆಯು ತನ್ನ ಮಗನ ಜೊತೆಗೂಡಿ ಮೋಹನನ್ನೇ ಕೊಲೆ ಮಾಡಿದ್ದಳು. ಬಳಿಕ ಮೃತದೇಹವನ್ನು ನದಿಯೊಂದರಲ್ಲಿ ಎಸೆದಿದ್ದರು.
ಮೃತದೇಹವೊಂದನ್ನು ಹಂದಿಗಳು ತಿನ್ನುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ ಮೋಹನ್ ಎಂಬಾತನ ಶವ ಎಂದು ತಿಳಿದುಬಂದಿದೆ. ಈ ಕುರಿತು ಮಹಿಳೆಯನ್ನು ವಿಚಾರಿಸಿದಾಗ ಮೈದುನನ ಜೊತೆಗೆ ಗಂಡನನ್ನೂ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಳ್ಳುತ್ತಾಳೆ.
ಇದನ್ನೂ ಓದಿ: ಡೊಮಿನಿಕಾದಲ್ಲಿ ಕಂಬಿಯ ಹಿಂದೆ ಮೆಹುಲ್ ಚೋಕ್ಸಿ: ಕೈ ಮೇಲೆ ಸುಟ್ಟಗಾಯಗಳು ಪತ್ತೆ; ಹಲ್ಲೆ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ