ಪ್ರಧಾನಿಗಳೇ,ಮೌನ ಬೇಡ,ನಿಮ್ಮ ಉತ್ತರಕ್ಕೆ ದೇಶವೇ ಕಾಯುತ್ತಿದೆ: ರಾಹುಲ್
Team Udayavani, Apr 13, 2018, 6:05 PM IST
ಹೊಸದಿಲ್ಲಿ : ಉತ್ತರ ಪ್ರದೇಶದ ಉನ್ನಾವ್ ಮತ್ತು ಜಮ್ಮು ಕಾಶ್ಮೀರದ ಕಠುವಾ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಾಣ ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಆರೋಪಿಸಿ ಖಂಡಿಸಿದ್ದಾರೆ.
“ಮಾನ್ಯ ಪ್ರಧಾನಿಗಳೇ, ನಿಮ್ಮ ಮೌನವನ್ನು ನಾವು ಒಪ್ಪುವುದಿಲ್ಲ. ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸೆ ಮತ್ತು ದೌರ್ಜನ್ಯದ ಬಗ್ಗೆ ನೀವು ಏನು ಹೇಳುತ್ತೀರಿ ? ರಾಜ್ಯ ಸರಕಾರಗಳು ಆತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಏಕೆ ರಕ್ಷಿಸುತ್ತಿದೆ ? ನಿಮ್ಮ ಉತ್ತರಕ್ಕಾಗಿ ಇಡಿಯ ದೇಶವೇ ಕಾಯುತ್ತಿದೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಕಠುವಾ ಮತ್ತು ಉನ್ನಾವ್ ಗ್ಯಾಂಗ್ ರೇಪ್ ಪ್ರಕರಣಗಳನ್ನು ಪ್ರತಿಭಟಿಸಿ ನಿನ್ನೆ ಮಧ್ಯರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿ ಮಧ್ಯರಾತ್ರಿಯ ಮೋಂಬತ್ತಿ ಮೆರವಣಿಗೆಯನ್ನು ನಡೆಸಿದ್ದರು.
ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಹೆಚ್ಚುತ್ತಿರುವ ಹಿಂಸೆ ಮತ್ತು ದೌರ್ಜನ್ಯವನ್ನು ಹಾಗೂ ಪ್ರಧಾನಿ ಮೋದಿ ಅವರು ತಳೆದಿರುವ ಜಾಣ ಮೌನವನ್ನು ಅನೇಕ ವಿರೋಧ ಪಕ್ಷಗಳು ಪ್ರಶ್ನಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ