MSRTC ನೌಕರರ ಮುಷ್ಕರ ಆರಂಭ: ಪ್ರಯಾಣಿಕರು ಸಂಕಷ್ಟದಲ್ಲಿ
Team Udayavani, Oct 17, 2017, 11:35 AM IST
ಮುಂಬಯಿ : ವೇತನ ಏರಿಕೆಯನ್ನು ಆಗ್ರಹಿಸಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್ಆರ್ಟಿಸಿ) ಒಂದು ಲಕ್ಷಕ್ಕೂ ಅಧಿಕ ನೌಕರರು ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದು ದೀಪಾವಳಿ ಹಬ್ಬದ ಸಲುವಾಗಿ ದೂರದೂರುಗಳಿಗೆ ಪ್ರಯಾಣಿಸದವ ಸಹಸ್ರಾರು ಜನರಿಗೆ ಇದರಿಂದ ತೀವ್ರ ತೊಂದರೆ ಉಂಟಾಗಿದೆ.
ನಿನ್ನೆ ಸೋಮವಾರ ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭವಾಗಿದ್ದು ನಿತ್ಯ ಓಡಾಟದ ಜನರ ಸಂಕಷ್ಟಗಳನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುವ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೆ, ಶಾಲಾ ಬಸ್ಸುಗಳಿಗೆ ಪ್ರಯಾಣಿಕರ ಸಾಗಾಟಕ್ಕೆ ಅನುಮತಿ ನೀಡುವಂತೆ ಮಹಾರಾಷ್ಟ್ರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ನೌಕರರ ಈ ಮುಷ್ಕರವನ್ನು ಕಾನೂನು ಬಾಹಿರವೆಂದು ಹೇಳಿದೆ.
ರಾಜ್ಯ ಸಾರಿಗೆ ನಿಗಮದ ನೌಕರರು ತಮಗೂ ಏಳನೇ ವೇತನ ಆಯೋಗದ ವೇತನ ಶ್ರೇಣಿಯನ್ನು ಅನುಷ್ಠಾನಿಸಬೇಕು ಮತ್ತು ಮಧ್ಯಾವಧಿಯಾಗಿ ಶೇ.25ರ ವೇತನ ಏರಿಕೆಯನ್ನು ಮಾಡಬೇಕು ಎಂದು ಒತ್ತಾಯಿಸಿ ಮುಷ್ಕರಕ್ಕೆ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ