![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಜಿನ್ನಾ ಸ್ವಾತಂತ್ರ್ಯ ಹೋರಾಟಗಾರ: ಮೆಮನ್
Team Udayavani, May 1, 2019, 12:19 PM IST
![2-aa](https://www.udayavani.com/wp-content/uploads/2019/05/2-aa-620x310.jpg)
ಮುಂಬಯಿ: ಮೊಹಮ್ಮದ್ ಅಲಿ ಜಿನ್ನಾ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರು ಎಂಬ ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಅವರ ಹೇಳಿಕೆಯ ಬೆನ್ನಲ್ಲೇ, ಎನ್ಸಿಪಿ ನಾಯಕ ಮಜೀದ್ ಮೆಮನ್ ಜಿನ್ನಾ ಪರ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪಾಕಿಸ್ತಾನದ ಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಸ್ವಾತಂತ್ರ್ಯ ಹೋರಾಟಕ್ಕಾಗಿ ವಿಶೇಷ ಕೊಡುಗೆ ನೀಡಿದ್ದಾರೆ. ಜಿನ್ನಾ ಮುಸ್ಲಿಂ ಆಗಿದ್ದರಿಂದಲೇ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶತ್ರುಘ್ನ ಸಿನ್ಹಾ ಅವರನ್ನು ದೇಶದ್ರೋಹಿ ಅಂತಾರೆ ಎಂದು ಮೆಮನ್ ಹೇಳಿದ್ದಾರೆ. ಮಹಾತ್ಮಾ ಗಾಂಧಿಯಿಂದ ಹಿಡಿದು ಮೊಹಮ್ಮದ್ ಅಲಿ ಜಿನ್ನಾವರೆಗೆ ಎಲ್ಲರೂ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರು ಎಂದು ಶತ್ರುಘ್ನ ಸಿನ್ಹಾ ಶನಿವಾರ ಹೇಳಿದ ಬಳಿಕ, ಇಂದು ಮೆಮನ್ ಅವರಲ್ಲಿ ಪ್ರತಿಕ್ರಿಯೆ ಕೇಳಿದಾಗ, ಶತ್ರುಘ್ನ ಸಿನ್ಹಾ ಅವರು ನಿನ್ನೆವರೆಗೆ ಬಿಜೆಪಿಯಲ್ಲಿದ್ದರು ಎಂಬುದು ಅಮಿತ್ ಶಾ ಅವರಿಗೆ ನೆನಪಿರಲಿ. ಅವರೇನಾದರೂ ದೇಶದ್ರೋಹದ ಹೇಳಿಕೆ ನೀಡಿದ್ದರೆ ಅದು ಬಿಜೆಪಿಯಿಂದಲೇ ಕಲಿತದ್ದು ಎಂದು ವ್ಯಂಗ್ಯವಾಡಿದ್ದಾರೆ.
ಜಿನ್ನಾ ಅವರು ಸ್ವಾತಂತ್ರ್ಯ ಹೋರಾಟಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರೋರ್ವ ಮುಸ್ಲಿಂ ಆಗಿದ್ದರಿಂದಲೇ ಅವರ ಬಗ್ಗೆ ಅಸಮಾಧಾನ ಹೊಂದಿರುವ ಬಿಜೆಪಿ ಶತ್ರುಘ್ನ ಸಿನ್ಹಾರನ್ನು ದೇಶದ್ರೋಹಿ ಎನ್ನುತ್ತಿದೆ ಎಂದು ಮೆಮನ್ ತಿಳಿಸಿದ್ದಾರೆ. ಮಧ್ಯ ಪ್ರದೇಶದ ಚಿಂದ್ವಾರ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಶತ್ರುಘ್ನ ಸಿನ್ಹಾ ಅವರು, ಮಹಾತ್ಮಾ ಗಾಂಧಿ, ಸರ್ದಾರ್ ಪಟೇಲ್ ಮತ್ತು ಜವಾಹರ್ ಲಾಲ್ ನೆಹರೂ ಜತೆ ಮೊಹಮ್ಮದ್ ಅಲಿ ಜಿನ್ನಾ ಕೂಡಾ ಸ್ವಾತಂತ್ರ ಹೋರಾಟ ಮಾಡಿದ್ದರು ಎಂದು ಹೇಳಿದ್ದರು. ಆಮೇಲೆ ತಾನು ಬಾಯ್ತಪ್ಪಿನಿಂದ ಈ ರೀತಿಯಾಗಿ ಹೇಳಿದ್ದೆ ಎಂದಿದ್ದರು. ಇದಕ್ಕೆ ಬಿಜೆಪಿ ರಾಷ್ಟಾÅಧ್ಯಕ್ಷ ಅಮಿತ್ ಶಾ ಅವರು ಇದು ದೇಶದ್ರೋಹದ ಹೇಳಿಕೆಯಾಗಿದೆ ಎಂದು ಕಿಡಿಕಾರಿದ್ದರು. ಶತ್ರುಘ್ನ ಸಿನ್ಹಾ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.