ಭಾವಿ ಸೊಸೆಯೊಂದಿಗೆ ಮುಖೇಶ್ ಅಂಬಾನಿ ತಿರುಪತಿಗೆ ಭೇಟಿ: 1.5 ಕೋಟಿ ರೂ. ದೇಣಿಗೆ
Team Udayavani, Sep 16, 2022, 6:39 PM IST
ತಿರುಪತಿ: ಆಂಧ್ರಪ್ರದೇಶದಲ್ಲಿನ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ಉದ್ಯಮಿ ಮುಖೇಶ್ ಅಂಬಾನಿ ಅವರು, ಕಿರಿಯ ಪುತ್ರ ಅನಂತ್ ಅಂಬಾನಿಯವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಅವರೊಂದಿಗೆ ಶುಕ್ರವಾರ ಭೇಟಿ, ದೇವಾಲಯಕ್ಕೆ 1.5 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಇದನ್ನೂ ಓದಿ:ಮಗಳ ಶವ ಬರೋಬ್ಬರಿ 44 ದಿನ ಉಪ್ಪಿನಲ್ಲಿಟ್ಟ ತಂದೆ! ಯಾಕೆ ಗೊತ್ತೇ..
ಶುಕ್ರವಾರ ದೇಗುಲ ಭೇಟಿಗೆ ಮೊದಲು ದೇವಾಲಯದ ಆನೆಗಳಿಗೆ ಆಹಾರ ನೀಡಿದರು. ಬಳಿಕ ಅಭಿಷೇಕ ಹಾಗೂ ನಿಜಪಾದ ದರ್ಶನ ಸೇವೆಯನ್ನು ಅಂಬಾನಿ ಮಾಡಿದರು. ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಧರ್ಮ ರೆಡ್ಡಿಯವರು ಅಂಬಾನಿಯವರನ್ನು ಸ್ವಾಗತಿಸಿದರು ಹಾಗೂ ದರ್ಶನಕ್ಕೆ ವ್ಯವಸ್ಥೆ ಮಾಡಿದರು.
ದರ್ಶನದ ನಂತರ ರಂಗನಾಯಕ ಮಂಟಪದಲ್ಲಿ ವೇದಪಾರಂಗತರಿಂದ ವೇದಘೋಷ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖೇಶ್ ಅಂಬಾನಿ, ತಿರುಮಲಕ್ಕೆ ಭೇಟಿ ನೀಡುವುದು ಅತ್ಯಂತ ಖುಷಿಯ ಸಂಗತಿ. ತಿರುಮಲ ದೇವಸ್ಥಾನ ಪ್ರತಿ ವರ್ಷವೂ ಅಭಿವೃದ್ಧಿ ಹೊಂದುತ್ತಿದೆ. ಎಲ್ಲರಿಗೂ ಒಳ್ಳೆಯದು ಮಾಡು ಎಂದು ವೆಂಕಟೇಶ್ವರ ಸ್ವಾಮಿಯ ಬಳಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ