ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು
Team Udayavani, Jun 11, 2019, 11:05 AM IST
ಗುರುಗ್ರಾಮ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರನ್ನುಸೋಮವಾರ ರಾತ್ರಿ ಇಲ್ಲಿನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾದವ್ ಅವರನ್ನು ಲಕ್ನೋದಿಂದ ವಿಮಾನದಿಂದ ಕರೆತಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ವಕ್ತಾರರು ತಿಳಿಸಿದ್ದಾರೆ.
ಸೋಮವಾರಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಲಾಯಂ ಸಿಂಗ್ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿದ್ದರು.
79 ರ ಹರೆಯದ ಮುಲಾಯಂ ಅವರ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾದ ಹಿನ್ನಲೆಯಲ್ಲಿ ಭಾನುವಾರ ಎಂದಿನಂತೆ ಪರೀಕ್ಷೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗಳನ್ನು ನಡೆಸಲಾಗಿತ್ತು.
ಮೇದಾಂತ ಆಸ್ಪತ್ರೆಯ ಅಧಿಕಾರಿಗಳು ಇದುವರೆಗೆ ಮುಲಾಯಂ ಸಿಂಗ್ ಅವರ ಆರೋಗ್ಯದ ಕುರಿತು ಯಾವುದೇ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು