ಮುಂಬಯಿ:16 ಸೊಮಾಲಿಯನ್ ಕಡಲ್ಗಳ್ಳರಿಗೆ 7ವರ್ಷ ಜೈಲು
Team Udayavani, Aug 9, 2017, 4:48 PM IST
ಮುಂಬಯಿ: 6 ವರ್ಷದ ಹಿಂದೆ ಮೀನುಗಾರಿಕಾ ಬೋಟ್ ಒಂದನ್ನು ಇರಾನ್ನಲ್ಲಿ ಅಪಹರಿಸಿ ಇರಾನ್ ಮತ್ತು ಪಾಕಿಸ್ಥಾನದ ಮೀನುಗಾರರನ್ನು ಒತ್ತೆಸೆರೆಯಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೆಷನ್ಸ್ ನ್ಯಾಯಾಲಯವೊಂದು 16 ಮಂದಿ ಸೊಮಾಲಿಯನ್ ಕಡಲ್ಗಳ್ಳರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
2011ರಲ್ಲಿ ನಡೆದಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶರಾದ ಜೆ.ಸಿ.ಜಗದಾಳೆ ಅವರು ಒಳಸಂಚು, ಕೊಲೆ ಯತ್ನ, ಅಪಹರಣ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯ ವಿವಿಧ ಸೆಕ್ಷನ್ಗಳಡಿಯಲ್ಲಿ ಈ 16ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಪಿತ್ತರಲ್ಲದೆ ಪ್ರತಿಯೋರ್ವರಿಗೂ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದರು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರಂಜಿತ್ ಸಾಂಗ್ಲೆ ತಿಳಿಸಿದರು.
ಅಲ್ಲದೆ ಪ್ರತಿಯೋರ್ವ ದೋಷಿಗೂ ತಲಾ 14,000ರೂ.ಗಳ ದಂಡವನ್ನು ವಿಧಿಸಿದ ನ್ಯಾಯಾಧೀಶರು ಅಪರಾಧಿಗಳು ಜೈಲು ಶಿಕ್ಷೆಯ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಸೊಮಾಲಿಯಾಕ್ಕೆ ಗಡೀಪಾರು ಮಾಡುವಂತೆ ಸರಕಾರಕ್ಕೆ ನಿರ್ದೇಶ ನೀಡಿದರು.
ಇದೇ ವೇಳೆ ನ್ಯಾಯಾಧೀಶರು ಒತ್ತೆ ಹಣಕ್ಕಾಗಿ ಅಪಹರಣ, ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಹೊರಿಸಲಾಗಿದ್ದ ಆರೋಪಗಳಿಂದ ಇವರನ್ನು ದೋಷಮುಕ್ತಿಗೊಳಿಸಿತು. 16ಮಂದಿ ಪೈಕಿ ಓರ್ವಾತ ವಿಚಾರಣೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ