ಮುಂಬಯಿ :ಘಾಟ್ಕೋಪರ್ ಕಟ್ಟಡ ಕುಸಿತ ;ಸಾವಿನ ಸಂಖ್ಯೆ 17ಕ್ಕೆ
Team Udayavani, Jul 26, 2017, 11:37 AM IST
ಮುಂಬಯಿ: ಉಪನಗರ ಘಾಟ್ಕೊಪರ್ನಲ್ಲಿ ಮಂಗಳವಾರ 4 ಅಂತಸ್ತಿನ ವಸತಿ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 17ಕ್ಕೇರಿದೆ.
ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಸಿ 28 ಮಂದಿಯನ್ನುಅವಶೇಷಗಳ ಅಡಿಯಿಂದ ಹೊರತೆಗೆದಿದ್ದರು,ಆ ಪೈಕಿ 17 ಮಂದಿ ಸಾವನ್ನಪ್ಪಿದ್ದು 11 ಮಂದಿ ಗಂಭೀರಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಅಗ್ನಿಶಾಮಕ ದಶದ ಸಿಬಂದಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಸಂಬಂಧಿಸಿ ಕಟ್ಟಡದ ಮಾಲಿಕ ಶಿವಸೇನಾ ನಾಯಕಶಿತಾಪ್ ಎನ್ನುವವರನ್ನು ಬಂಧಿಸಿ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಸುಮಾರು 35 ವರ್ಷ ಹಳೆಯ ಸಾಯಿದರ್ಶನ್ ಅಪಾರ್ಟ್ಮೆಂಟ್ ಎಂಬ ಹೆಸರಿನ ಈ ಕಟ್ಟಡವು ಅತ್ಯಂತ ಶಿಥಿಲಾವಸ್ಥೆಯಲ್ಲಿತ್ತು. ಕಟ್ಟಡದ ತಳಮಹಡಿಯಲ್ಲಿ ಕೆಲವು ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಅದು ಅವಘಡಕ್ಕೆ ಕಾರಣವಾಗಿರಬಹುದೆಂದು ಕಟ್ಟಡದ ನಿವಾಸಿಯೊಬ್ಬರು ಪ್ರತಿಪಾದಿಸಿದ್ದಾರೆ.
ಸ್ಥಳಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ ನೀಡಿ ಸಂತ್ರಸ್ತ್ರರಿಗೆ ನೆರವಾಗಲು ಬಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಟ್ಟಡ ಕುಸಿತಕ್ಕೆ ಕಾರಣ ಏನು ಎನ್ನುವ ಕುರಿತು 15 ದಿನಗಳ ಒಳಗೆ ವರದಿ ಸಿದ್ದಪಡಿಸಿಲು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್