3 ಬಿಜೆಪಿ ಶಾಸಕರಿಗೆ 100 ಕೋಟಿ ರೂ.ಗೆ ಬೇಡಿಕೆ; ನಾಲ್ವರ ಬಂಧನ
ಮಹಾ ವಂಚನೆಗೆ ಯತ್ನ ; ಏಕನಾಥ ಶಿಂಧೆ ಸಂಪುಟದಲ್ಲಿ ಸ್ಥಾನ ನೀಡುವ ಆಮಿಷ...!
Team Udayavani, Jul 20, 2022, 1:55 PM IST
ಮುಂಬಯಿ: ಹೊಸದಾಗಿ ರಚಿತವಾದ ಮಹಾರಾಷ್ಟ್ರದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ನೀಡುವುದಾಗಿ 100 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ನಾಲ್ವರನ್ನು ಸೋಮವಾರ ಬಂಧಿಸಿದೆ.
3 ಬಿಜೆಪಿ ಶಾಸಕರಿಗೆ 100 ಕೋಟಿ ರೂಪಾಯಿಗಳನ್ನು ಕೇಳಿದ ಆರೋಪದ ಮೇಲೆ 4 ಆರೋಪಿಗಳನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಆರೋಪಿಗಳನ್ನು ರಿಯಾಜ್ ಶೇಖ್, ಯೋಗೇಶ್ ಕುಲಕರ್ಣಿ, ಸಾಗರ್ ಸಂಗ್ವಾಯ್ ಮತ್ತು ಜಾಫರ್ ಉಸ್ಮಾನಿ ಎಂದು ಗುರುತಿಸಲಾಗಿದೆ ಎಂದು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಮುನ್ನವೇ ಈ ಸುದ್ದಿ ಬಂದಿದ್ದು, ಸಂಪುಟ ರಚನೆ ಕಸರತ್ತಿನ ಅಂತಿಮ ದಿನಾಂಕವು ಇನ್ನೂ ಚರ್ಚೆಯಲ್ಲಿದ್ದರೂ, ಪಕ್ಷದ ಕಾರ್ಯಸೂಚಿಯಲ್ಲಿ ಸಂಪುಟ ವಿಸ್ತರಣೆಯು ಹೆಚ್ಚಿನದಾಗಿದೆ ಮತ್ತು ಜುಲೈ ನಾಲ್ಕನೇ ವಾರದಲ್ಲಿ ರಚನೆ ನಡೆಯಲಿದೆ ಎಂದು ಬಿಜೆಪಿಯ ಮೂಲಗಳು ಹೇಳಿವೆ.
ರಾಜಕೀಯ ಪರಿಸ್ಥಿತಿಯ ಲಾಭ ಪಡೆಯುವ ಸಲುವಾಗಿ ನಾಲ್ವರು ಆರೋಪಿಗಳು ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಹೆಸರಿನಲ್ಲಿ 3 ಶಾಸಕರಿಗೆ ವಂಚಿಸಲು ಯತ್ನಿಸಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್