ಮುಂಬೈನಲ್ಲಿ ವರುಣನ ಆರ್ಭಟ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ರೈಲು ಸೇವೆ ಸ್ಥಗಿತ
Team Udayavani, Sep 23, 2020, 9:22 AM IST
ನವದೆಹಲಿ: ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಮುಂಬಯಿಯಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ತೊಡಕಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಇದ್ದೂ, ನಾಗರಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಉಪನಗರಗಳಲ್ಲಿ ಸುಮಾರು 150 ಮಿಮೀ -200 ಮಿ.ಮೀ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಮುಂಬೈ ನಗರದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ರಸ್ತೆಯಲ್ಲೆಲ್ಲಾ ನೀರು ತುಂಬಿಕೊಂಡಿದ್ದು, ಕೆಲಸದ ಸ್ಥಳಗಳಿಗೆ ಉದ್ಯೋಗಿಗಳಿಗೆ ತಲುಪಲು ಹೆಣಗಾಡುತ್ತಿದ್ದಾರೆ. ಮಧ್ಯರಾತ್ರಿಯ ಹೊತ್ತಿಗೆ ಮಳೆಯ ತೀವ್ರತೆಯು ಕಡಿಮೆಯಾಗಿದ್ದರೂ ಮುಂಜಾನೆ 3.30 ರಿಂದ ಗುಡುಗು ಸಹಿತ ಮಳೆಯಾಗುತ್ತಿದೆ.
ಪ್ರವಾಹ ಪರಿಸ್ಥಿತಿಯಿಂದಾಗಿ ಕೇಂದ್ರ ಮತ್ತು ಬಂದರು ಮಾರ್ಗಗಳಲ್ಲಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಂಬೈನ ನಾಗರಿಕ ಸಂಸ್ಥೆ – ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಇಂದು ಬೆಳಿಗ್ಗೆ ಟ್ವೀಟ್ ಮಾಡಿದೆ. ಆದಾಗ್ಯೂ, ಪಶ್ಚಿಮ ರೈಲ್ವೆ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ.
ಪ್ರಾದೇಶಿಕ ಹವಾಮಾನ ಇಲಾಖೆ, ತಗ್ಗು ಸ್ಥಳಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸಬೇಕು. ಸಂಚಾರ ಅಡೆತಡೆಗಳು ಮಾತ್ರವಲ್ಲದೆ ವಿದ್ಯುತ್ ಕಡಿತವುಂಟಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
26 ವರ್ಷಗಳ ಬಳಿಕ ಎರಡನೇ ಬಾರಿಗೆ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. ಸೆಪ್ಟೆಂಬರ್ 20, 2016 ರಂದು ಮುಂಬೈನಲ್ಲಿ 303.7 ಮಿ.ಮೀ ಮಳೆಯಾಗಿದ್ದು ಈವರೆಗಿನ ದಾಖಲೆಯಾಗಿತ್ತು. ಇದಕ್ಕೂ ಮೊದಲು, ಸೆಪ್ಟೆಂಬರ್ 23, 1993 ರಂದು 312.4 ಮಿಮೀ ಮಳೆ ಮತ್ತು ಸೆಪ್ಟೆಂಬರ್ 23, 1981 ರಂದು 318.2 ಮಿಮೀ ಮಳೆಯಾಗಿದೆ.
Mumbaikars, train services on Central & Harbour lines have been suspended due to water logging following the heavy rainfall yesterday. However, Western Railway is functioning as usual.#MumbaiRains#MyBMCUpdates
— माझी Mumbai, आपली BMC (@mybmc) September 23, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!
ದೇಶದ ಬಗ್ಗೆ ಕಾಳಜಿ ಹೊಂದದ ಜನರಿಂದ ಏನನ್ನೂ ನಿರೀಕ್ಷಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ
ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವು
ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ
ಮುಂಬೈ: ಬೊರಿವಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ರಕ್ಷಣಾ ಕಾರ್ಯಾಚರಣೆ