ಬಯಲು ಶೌಚ ಮುಕ್ತವಾಗದ ಮುಂಬಯಿ
Team Udayavani, Oct 13, 2019, 6:35 PM IST
ಮುಂಬಯಿ: ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಬಯಲು ಶೌಚ ಮುಕ್ತ ದೇಶ ಎಂದು ಘೋಷಿಸಿದ್ದಾರೆ. ಆದರೆ ಭಾರತದಲ್ಲಿ ಇನ್ನೂ ಬಯಲು ಶೌಚಾಲಯಗಳು ಕಂಡುಬರುತ್ತಿವೆ. ಮುಂಬಯಿನ ಮಾಹಿಮ್ ನಲ್ಲಿ 2014 ಮತ್ತು 2019ರ ಮಧ್ಯೆ ಯಾವುದೇ ಬದಲಾದ ಪರಿಸ್ಥಿತಿ ಕಂಡು ಬರುತ್ತಿಲ್ಲ.
2014ರಲ್ಲಿ ಬಯಲು ಶೌಚ ಮುಕ್ತ ಮಾಡುವ ಪಣತೊಟ್ಟ ಕೇಂದ್ರ ಸರಕಾರ 2019ರ ವೇಳೆ ಪ್ರತಿ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿತ್ತು. ಆದರೆ ಇಂದು ಅಂಕಿ-ಅಂಶಗಳ ಪ್ರಕಾರ ದೇಶದಲ್ಲಿ ಶೇ. 99 ಶೌಚಾಲಯಗಳು ನಿರ್ಮಾಣಗೊಂಡಿವೆ. ಆದರೆ ಜನರು ಅದನ್ನು ಬಳಸಲು ಮುಂದಾಗುತ್ತಿಲ್ಲ. ತಮ್ಮ ಮನೆಯಲ್ಲಿ ಶೌಚಾಲಯ ಇದ್ದರೂ ಅದನ್ನು ಬಳಸುತ್ತಿಲ್ಲ. ಬದಲಾಗಿ ಬಯಲನ್ನೇ ಶೌಚಾಲಯವನ್ನಾಗಿಸುತ್ತಿದ್ದಾರೆ.
ಮುಂಬಯಿನ ಮಹಿಮ್ ರೈಲು ನಿಲ್ದಾಣದಲ್ಲಿ ಶೌಚಾಲಯವನ್ನು ಬಳಸದೇ ಬಯಲಿನಲ್ಲೇ ಪೂರೈಸುತ್ತಿದ್ದಾರೆ. ಇಂತಹ ಘಟನೆಗಳು ಈ ನಗರದ ಸುತ್ತಲಿನ ಹಳ್ಳಿಗಳಲ್ಲಿ, ರೈಲು ಹಳಿಗಳ ಮೇಲೆ, ರೈಲು ನಿಲ್ದಾಣಗಳಲ್ಲಿ ಕಂಡುಬರುತ್ತಿದೆ. 2018ರಲ್ಲೇ ರಾಜ್ಯ ಬಯಲು ಮಲ ವಿಸರ್ಜನೆ ಮುಕ್ತ ಎಂದು ಮಹಾರಾಷ್ಟ್ರ ಸರಕಾರ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ