Mumbai: ಭೀಕರ ಹತ್ಯೆ; ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಪ್ರಿಯಕರ
Team Udayavani, Jun 8, 2023, 9:38 AM IST
ಮುಂಬಯಿ: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಮನೋಜ್ ಸಹಾನಿ (36) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದರು. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.
ಬುಧವಾರ ಸಂಜೆ (ಜೂ.7 ರಂದು) ಫ್ಲಾಟ್ ನ ಇತರೆ ಸದಸ್ಯರು ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.
“ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್ಶಿಪ್ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್ ನಿಂದ ತುಂಡು ಮಾಡಲಾಗಿದೆ. ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.
ಈ ಸಂಬಂಧ ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ