ಹುಸಿ ಬಾಂಬ್ ಬೆದರಿಕೆ ಕರೆ: ಇಬ್ಬರ ಬಂಧನ
Team Udayavani, Aug 7, 2021, 11:00 PM IST
ಮುಂಬಯಿ: ಮುಂಬಯಿಯ ಮೂರು ರೈಲ್ವೇ ನಿಲ್ದಾಣ ಮತ್ತು ನಟ ಅಮಿತಾಬ್ ಬಚ್ಚನ್ ಅವರ ಬಂಗ್ಲೆಯಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಹುಸಿ ಕರೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಲ್ಲಿ ಓರ್ವ ಟ್ರಕ್ ಚಾಲಕನಾಗಿದ್ದು, ಶುಕ್ರವಾರ ರಾತ್ರಿ 9.45ರ ಸುಮಾರಿಗೆ ಮುಂಬಯಿ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಬೈಕಲಾ, ದಾದರ್ ರೈಲ್ವೇ ನಿಲ್ದಾಣಗಳಲ್ಲಿ ಮತ್ತು ಅಮಿತಾಬ್ ಬಚ್ಚನ್ ಅವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹೇಳಿದ್ದ. ಈ ನಾಲ್ಕು ಸ್ಥಳಗಳಲ್ಲಿ ಪೊಲೀಸರು ತತ್ಕ್ಷಣ ಶೋಧ ನಡೆಸಿದ್ದು ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.
ಸಿಎಸ್ಎಂಟಿ ನಿಲ್ದಾಣದ ಎಲ್ಲ ಪ್ಲಾಟ್ಫಾರ್ಮ್, ವಿಭಾಗೀಯ ರೈಲ್ವೇ ಮ್ಯಾನೇಜರ್ ಕಚೇರಿ, ಪಾರ್ಕಿಂಗ್ ಮತ್ತು ಇತರ ಹತ್ತಿರದ ಪ್ರದೇಶಗಳನ್ನು ಬಿಡಿಡಿಎಸ್ ಮತ್ತು ಶ್ವಾನದಳಗಳು ಶೋಧ ನಡೆಸಿದರು. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ತ್ವರಿತ ಪ್ರತಿಕ್ರಿಯೆ ತಂಡಗಳು (ಕ್ಯೂಆರ್ಟಿ), ಮರೀನ್ ಡ್ರೈವ್ ಮತ್ತು ಆಜಾದ್ ಮೈದಾನ ಸೇರಿದಂತೆ ಕೆಲವು ಸ್ಥಳೀಯ ಪೊಲೀಸ್ ಠಾಣೆಗಳ ತಂಡಗಳು ಕಾರ್ಯಾಚರಣೆ ನಡೆಸಿವೆ. ಆದರೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ.
ಪೊಲೀಸರು ಕರೆ ಮಾಡಿದ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಿದ್ದು, ಥಾಣೆ ಜಿಲ್ಲೆಯ ಮುಂಬ್ರಾ ಬಳಿಯ ಶಿಲ್ಫಾಠಾ ಪ್ರದೇಶದಲ್ಲಿ ಆತನನ್ನು ಪತ್ತೆ ಹಚ್ಚಿದ್ದಾರೆ. ಕರೆ ಮಾಡಿದವ ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಟ್ರಕ್ ಚಾಲಕರಾಗಿದ್ದಾರೆ. ಆತನಿಗೆ ಕುಡಿಯುವ ಅಭ್ಯಾಸವಿದೆ ಎಂದು ತಿಳಿದುಬಂದಿದೆ. ಆತನೊಂದಿಗೆ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ