ಮುಂಬಯಿಯ ಕೊಲೆ ಆರೋಪಿಯನ್ನು ನೇಪಾಳ ಗಡಿಯಲ್ಲಿ ಬಂಧಿಸಿದ ಪೊಲೀಸರು
Team Udayavani, Sep 21, 2020, 4:42 PM IST
ಮುಂಬಯಿ: ಕೆಲ ದಿನಗಳ ಹಿಂದೆ ಮುಂಬಯಿಯ ಡೋಂಗ್ರಿಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ 29ರ ಹರೆಯದ ವ್ಯಕ್ತಿಯನ್ನು ನೇಪಾಳದ ಗಡಿ ಭಾಗದಲ್ಲಿ ರವಿವಾರ ಬಂಧಿಸಲಾಗಿದೆ.
ಹಣದ ವಿವಾದದಿಂದಾಗಿ ಬಬ್ಲೂ ಯಾದವ್ ಮತ್ತು ಇನ್ನೋರ್ವ ವ್ಯಕ್ತಿ ಸೇರಿಕೊಂಡು ಮುಖೇಶ್ ಗುಪ್ತಾ ಎನ್ನುವವರನ್ನು ಕೊಲೆ ಮಾಡಿದ್ದರು. ಘಟನೆಯ ಅನಂತರ ಯಾದವ್ ನೇಪಾಳಕ್ಕೆ ಪರಾರಿಯಾಗಿದ್ದರೆ, ಮತ್ತೊಬ್ಬ ತನ್ನ ಊರಾದ ಉತ್ತರ ಪ್ರದೇಶದ ಮೀರಗಂಜ್ ಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸೆ.15 ರಂದು ಕೊಲೆ ಬೆಳಕಿಗೆ ಬಂದ ಅನಂತರ ನಾವು ಆರೋಪಿಗಳನ್ನು ಬೇಟೆಯಾಡಲು ತಂಡಗಳನ್ನು ರಚಿಸಿದೆವು. ಸುಳಿವಿನ ಮೇರೆಗೆ ನಾವು ಯಾದವ್ ನನ್ನು ಇಂಡೋ-ನೇಪಾಳ ಗಡಿಯಲ್ಲಿರುವ ಅರಣ್ಯ ಪ್ರದೇಶದಿಂದ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಅವರೇನೋ ಶಬ್ದ ಬಳಕೆ ಮಾಡಿದರು, ಇನ್ನು ಈ ರೀತಿ ಮಾತಾಡಬಾರದು ಅಷ್ಟೇ: ವಾರ್ನ್ ಮಾಡಿದ ನಾರಾಯಣಗೌಡ
ಗುಪ್ತಾ ಮತ್ತು ಯಾದವ್ ಬಡಗಿಗಳಾಗಿದ್ದು, ಡೋಂಗ್ರಿಯ ಫ್ಲಾಟೋಂದರಲ್ಲಿ ಗುತ್ತಿಗೆ ಕೆಲಸ ಪಡೆದಿದ್ದರು. ಹಣಕ್ಕೆ ಸಂಬಂಧಿಸಿದಂತೆ ಅವರ ನಡುವೆ ವಿವಾದ ಉಂಟಾಗಿತ್ತು ಎಂದು ಡೋಂಗ್ರಿ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಅವಿನಾಶ್ ತಿಳಿಸಿದ್ದಾರೆ. ಆರೋಪಿ ಯಾದವ್ ನನ್ನು ಸೆ. 24 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ