26/11 ಮುಂಬೈ ದಾಳಿ ಪಾಕ್ ಉಗ್ರರ ಕೃತ್ಯ, ಸರ್ಕಾರದ ಕೈವಾಡ ಇಲ್ಲ!
Team Udayavani, Mar 6, 2017, 5:07 PM IST
ನವದೆಹಲಿ:2008ರ ಮುಂಬೈ ಭಯೋತ್ಪಾದನಾ ದಾಳಿ ನಡೆಸಿರುವುದೇ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಎಂದು ಪಾಕಿಸ್ತಾನದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜನರಲ್ ಮಹಮ್ಮುದ್ ಅಲಿ ದುರ್ರಾನಿ ಸೋಮವಾರ ಆರೋಪಿಸಿದ್ದಾರೆ.
ಪಾಕ್ ಮೂಲದ ಉಗ್ರಗಾಮಿ ಸಂಘಟನೆ ಎಂದು ಆರೋಪಿಸಿದ ದುರ್ರಾನಿ, ಈ ದಾಳಿ ಹಿಂದೆ ಪಾಕ್ ಸರ್ಕಾರದ ಕೈವಾಡ ಇಲ್ಲ ಎಂದು ಹೇಳಿದರು.
ಇಂದು ಭಯೋತ್ಪಾದನೆ ಎಂಬುದು ಜಾಗತಿಕ ಬೆದರಿಕೆಯಾಗಿದೆ. ಹಾಗಾಗಿ ಭಯೋತ್ಪಾದನೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ದೇಶೀಯವಾಗಿ, ಪ್ರಾದೇಶಿಕವಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ.
2008ರ ನವೆಂಬರ್ 26ರಂದು ಮುಂಬೈ ಮೇಲೆ ದಾಳಿ ನಡೆಸಿದವರು ಪಾಕ್ ಮೂಲದವರು. ಇದೊಂದು ಗಡಿಭಯೋತ್ಪಾದನೆಯ ಕೃತ್ಯ ಎಂದು ವಿಶ್ಲೇಷಿಸಿದ ದುರ್ರಾನಿ, ನಾನಿದನ್ನು ಒಪ್ಪಿಕೊಳ್ಳಲು ದ್ವೇಷಿಸುತ್ತೇನೆ, ಆದರೆ ಇದು ಸತ್ಯ ಎಂದು ಹೇಳಿದರು.
ದುರ್ರಾನಿ ಅವರು ನವದೆಹಲಿಯಲ್ಲಿನ ಡಿಫೆನ್ಸ್ ಅಂಡ್ ಸ್ಟಡೀಸ್ ಅಂಡ್ ಅನಾಲಿಸೀಸ್ ಸಂಸ್ಥೆ ಆಯೋಜಿಸಿದ್ದ 19ನೇ ಏಶಿಯನ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ