Hydrafacial: 17,500 ಕೊಟ್ಟು ಫೇಷಿಯಲ್ ಮಾಡಿದ ಮಹಿಳೆಯ ಮುಖ ಹೇಗಾಗಿದೆ ನೋಡಿ
Team Udayavani, Jun 20, 2023, 2:17 PM IST
ಮುಂಬಯಿ: ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ಏನೇನೆಲ್ಲಾ ಮಾಡಿಕೊಳ್ಳುತ್ತಾರೆ, ಇದರಿಂದ ಕೆಲವರ ಸೌಂದರ್ಯ ಹೆಚ್ಚಾದರೆ ಇನ್ನು ಕೆಲವರದ್ದು ಇದ್ದ ಸೌಂದರ್ಯವೂ ಹೋಗಿ ಇನ್ನೇನೋ ಆಗಿ ಬಿಡುತ್ತದೆ, ಅದರಂತೆ ಮಹಾರಾಷ್ಟ್ರದ ಮಹಿಳೆಯೊಬ್ಬರು ತನ್ನ ಮುಖದ ಸೌಂದರ್ಯ ಹೆಚ್ಚಿಸಲು ಬರೋಬ್ಬರಿ 17,500 ಖರ್ಚು ಮಾಡಿ ಮುಖದ ಚರ್ಮ ಸುಟ್ಟಿಸಿಕೊಂಡ ಘಟನೆ ನಡೆದಿದೆ.
ಹೌದು ಕೆಲವೊಮ್ಮೆ ನಾವು ಹಚ್ಚಿಕೊಳ್ಳುವ ಸೌಂದರ್ಯ ವರ್ಧಕಗಳು ನಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತವೆ ಅದೇ ರೀತಿ ಮಹಾರಾಷ್ಟ್ರದ ಮಹಿಳೆಯ ಮುಖಕ್ಕೆ ಮಾಡಿದ ಫೇಷಿಯಲ್ ನಿಂದ ಮಹಿಳೆಯ ಮುಖದ ಚರ್ಮವೇ ಸುಟ್ಟು ಹೋಗಿದೆ.
ಘಟನೆಯ ವಿವರ:
ಜೂನ್ 17 ರಂದು ಮಹಿಳೆಯೊಬ್ಬರು ಅಂಧೇರಿಯ ಕಾಮಧೇನು ಶಾಪಿಂಗ್ ಸೆಂಟರ್ನಲ್ಲಿರುವ ಗ್ಲೋ ಲಕ್ಸ್ ಸಲೂನ್ ಗೆ ತೆರಳಿ 17,500 ರೂಪಾಯಿ ಮೌಲ್ಯದ ಹೈಡ್ರಾಫೇಶಿಯಲ್ ಚಿಕಿತ್ಸೆ ಪಡೆದುಕೊಂಡಿದ್ದರು ಚಿಕಿತ್ಸೆ ಪಡೆದು ಮನೆಗೆ ಬಂದ ಮಹಿಳೆಗೆ ಮುಖದಲ್ಲಿ ತುರಿಕೆಯ ಅನುಭವಾಗಿದೆ ಅಲ್ಲದೆ ಕೆಲವೇ ಹೊತ್ತಿನಲ್ಲಿ ಮುಖದ ಚರ್ಮ ಸುಟ್ಟು ಹೋಗಿ ವಿರೂಪಗೊಂಡಿದೆ.
ಹೈಡ್ರಾಫೇಶಿಯಲ್ ಎಂಬುದು ವೈದ್ಯಕೀಯ – ದರ್ಜೆಯ ರಿಸರ್ಫೇಸಿಂಗ್ ಚಿಕಿತ್ಸೆಯಾಗಿದ್ದು ಪರವಾನಗಿ ಪಡೆದ ವೈದ್ಯಕೀಯ ವೃತ್ತಿಪರರು, ಪ್ರಮಾಣೀಕೃತ ಹೈಡ್ರಾಫೇಶಿಯಲ್ ಸೌಂದರ್ಯಶಾಸ್ತ್ರಜ್ಞರು ಲಭ್ಯವಿರುವಲ್ಲಿ ಈ ಚಿಕಿತ್ಸೆಯನ್ನು ನೀಡಲಾಗುತ್ತದೆ ಆದರೆ ಈ ಬ್ಯೂಟಿ ಪಾರ್ಲರ್ ನಲ್ಲಿ ನುರಿತ ತಜ್ಞರಿಂದಲೇ ಚಿಕಿತ್ಸೆ ನೀಡಲಾಗಿತ್ತೆ ಎಂಬುದು ಪ್ರಶ್ನೆಯಾಗಿದೆ.
ಮಹಿಳೆ ತನ್ನ ಸುಂದರವಾದ ಮುಖದ ಕಳೆಯನ್ನು ಕಳೆದುಕೊಂಡು ನರಕಯಾತನೆ ಅನುಭವಿಸುತ್ತಿದ್ದಾರೆ. ಅಲ್ಲದೆ ಚಿಕಿತ್ಸೆ ನೀಡಿದ ಬ್ಯೂಟಿ ಪಾರ್ಲರ್ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ : 13000 ಅಡಿ ಆಳ; Titanic ಅವಶೇಷ ವೀಕ್ಷಿಸಲು ತೆರಳಿದ ಪ್ರವಾಸಿಗರ ಸಬ್ ಮರ್ಸಿಬಲ್ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ