ಕಮಲಾ ಮಿಲ್ಸ್‌ ದುರಂತ: ಪಬ್‌ ಮಾಲಕರ ಮಾಹಿತಿದಾರರಿಗೆ 1 ಲಕ್ಷ ರೂ.


Team Udayavani, Jan 6, 2018, 11:03 AM IST

Kamala-Mills-fire-700.jpg

ಮುಂಬಯಿ : ನಗರದ ಲೋವರ್‌ ಪರೇಲ್‌ ನಲ್ಲಿರುವ  ಕಮಲಾ ಮಿಲ್ಸ್‌ ಆವರಣದಲ್ಲಿನ ಎರಡು ರೆಸ್ಟೋರೆಂಟ್‌ – ಬಾರ್‌ನಲ್ಲಿ  ಕಳೆದ ಡಿ.29ರಂದು ಸಂಭವಿಸಿದ್ದ  ಭೀಕರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್‌ ಗೆ ಇನ್ನಷ್ಟು ಹೆಸರುಗಳನ್ನು ಸೇರಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಈಗಲೂ ತಲೆಮರೆಸಿಕೊಂಡಿರುವ ಪಬ್‌ ಮಾಲಕರ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಇನಾಮು ಕೊಡಲಾಗುವುದು ಎಂದು ಹೇಳಿದ್ದಾರೆ. 

ಮೋಜೋಸ್‌ ಬ್ರಿಸ್ಟೋದಲ್ಲಿ ಗಿರಾಕಿಗಳಿಗೆ ಅಕ್ರಮವಾಗಿ ಪೂರೈಸಲಾಗುತ್ತಿದ್ದ ಹುಕ್ಕಾದಿಂದ ಹಾರುತ್ತಿದ್ದ ಬೆಂಕಿಯ ಕಿಡಿಗಳೇ ಅಗ್ನಿ ಅವಘಡಕ್ಕೆ ಕಾರಣವಾಗಿದ್ದವು ಎಂಬ ವಿಷಯ ತನಿಖೆಯಲ್ಲಿ ಬೆಳಕಿಗೆ ಬಂದಿರುವುದನ್ನು ಅನುಸರಿಸಿ ಈ ಪ್ರಕರಣದ ಎಫ್ಐಆರ್‌ಗೆ ಇನ್ನಷ್ಟು ಹೆಸರುಗಳನ್ನು ಸೇರಿಸಲಾಗುವುದೆಂದು ಮುಂಬಯಿ ಪೊಲೀಸರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. 

ಕಮಲಾ ಮಿಲ್ಸ್‌ ಬೆಂಕಿಯಲ್ಲಿ 14 ಅಮಾಯಕ ಜೀವಗಳು ಸುಟ್ಟು ಕರಕಲಾಗಿದ್ದವು. ಈ ಅನಾಹುತಕ್ಕೆ ವಿದ್ಯುತ್‌ ಶಾರ್ಟ್‌ ಸರ್‌ಕ್ಯೂಟ್‌ ಕಾರಣವೆಂದು ಮೊದಲಲ್ಲಿ ಶಂಕಿಸಲಾಗಿತ್ತು. 

ಈ ಬೆಂಕಿ ಅವಘಡಕ್ಕೆ ಸಂಬಂಧಿಸಿದ ಎಫ್ಐಆರ್‌ನಲ್ಲಿ ಹೆಸರಿಸಲಾಗಿರುವ ಆರೋಪಿಗಳ ವಿರುದ್ಧ ಐಪಿಸಿಯ ಇನ್ನಷ್ಟು ಸೆಕ್ಷನ್‌ಗಳನ್ನು ಪ್ರಯೋಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. 

ಈ ನಡುವೆ ಮುಂಬಯಿ ಪೊಲೀಸರು ಈಗಲೂ ತಲೆ ಮರೆಸಿಕೊಂಡಿರುವ ಕಮಲಾ ಮಿಲ್ಸ್‌ ಆವರಣದೊಳಗಿನ ಒನ್‌ ಅಬೌವ್‌ ಪಬ್‌ನ ಮಾಲಕರ ಬಗ್ಗೆ ಮಾಹಿತಿ ಕೊಟ್ಟವರಿಗೆ ಒಂದು ಲಕ್ಷ ಇನಾಮು ಕೊಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಡಿ.29ರಂದು ಕಮಲಾ ಮಿಲ್ಸ್‌ ಆವರಣದೊಳಗೆ ಬೆಂಕಿ ಅನಾಹುತ ಸಂಭವಿಸಿ 14 ಮಂದಿ ಮೃತಪಟ್ಟು ಇತರ 30 ಮಂದಿ ಗಾಯಗೊಂಡ ಬಳಿಕ ಪಬ್‌ ಮಾಲಕರಾಗಿರುವ ಕೃಪೇಶ್‌ ಮನ್‌ಸುಖ್‌ಲಾಲ್‌ ಸಾಂಗ್ವಿ , ಜಿಗರ್‌ ಸಾಂಗ್ವಿ  ಮತ್ತು ಅಭಿಜೀತ್‌ ಮಾನ್‌ಕರ್‌ ತಲೆಮರೆಸಿಕೊಂಡಿದ್ದು ಅವರಿನ್ನೂ ಪತ್ತೆಯಾಗಿಲ್ಲ. 

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.