ಬಿಹಾರದ ಮುಂಗೇರ್ ಗುಂಡಿನ ದಾಳಿ ಬಗ್ಗೆ ಬಿಜೆಪಿ ಮೌನವಹಿಸಿರುವುದೇಕೆ? ಶಿವಸೇನಾ ಕಿಡಿ
ದುರ್ಗಾ ದೇವಿಯ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಾರಿಸಿದ್ದ ಗುಂಡಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ
Team Udayavani, Oct 30, 2020, 1:47 PM IST
ಮುಂಬೈ:ಬಿಹಾರದಲ್ಲಿ ದುರ್ಗಾ ದೇವಿಯ ವಿಸರ್ಜನೆ ವೇಳೆ ಮುಂಗೇರ್ ನಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆ ಹಿಂದುತ್ವದ ಮೇಲಿನ ಹಲ್ಲೆಯಾಗಿದ್ದು, ಭಾರತೀಯ ಜನತಾ ಪಕ್ಷ ಮೌನವಾಗಿರುವುದಕ್ಕೆ ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನಾ ಟೀಕಿಸಿದೆ.
ಬಿಹಾರದ ಮುಂಗೇರ್ ನಲ್ಲಿ ದುರ್ಗಾ ದೇವಿಯ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಾರಿಸಿದ್ದ ಗುಂಡಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.
ಮುಂಗೇರ್ ಫೈರಿಂಗ್ ಘಟನೆ ಹಿಂದುತ್ವದ ಮೇಲಿನ ದಾಳಿಯಾಗಿದೆ ಎಂದು ಶಿವಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ತಿಳಿಸಿದ್ದು, ಒಂದು ವೇಳೆ ಇಂತಹ ಘಟನೆ ಮಹಾರಾಷ್ಟ್ರ, ಪಶ್ಚಿಮಬಂಗಾಳ ಅಥವಾ ರಾಜಸ್ಥಾನದಲ್ಲಿ ನಡೆದಿದ್ದರೆ ರಾಜ್ಯಪಾಲರು ಹಾಗೂ ಬಿಜೆಪಿ ಮುಖಂಡರು ರಾಷ್ಟ್ರಪತಿ ಆಡಳಿತ ಹೇರುವಂತೆ ಒತ್ತಾಯಿಸುತ್ತಿದ್ದರು. ಆದರೆ ಬಿಹಾರ ರಾಜ್ಯದ ಗವರ್ನರ್ ಮತ್ತು ಬಿಜೆಪಿ ಮುಖಂಡರು ಯಾಕೆ ಈವರೆಗೂ ಈ ಪ್ರಶ್ನೆಯನ್ನು ಎತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಪಕ್ಷ ನೋಡಿ ಅಲ್ಲ ವ್ಯಕ್ತಿ ನೋಡಿ ಪ್ರಚಾರ; ಮುನಿರತ್ನ ದೊಡ್ಡತನ ನೋಡಿ ಬಂದಿದ್ದೇನೆ: ದರ್ಶನ್
ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಪ್ರಕಟವಾದ ಲೇಖನದಲ್ಲಿ, ನೋಡಿ ಬಿಹಾರ, ಉತ್ತರಪ್ರದೇಶ ಮತ್ತು ಹರ್ಯಾಣದಲ್ಲಿ ಏನು ನಡೆಯಿತು ಎಂದು? ಬಿಜೆಪಿ ಆಡಳಿತಾವಿರುವ ರಾಜ್ಯಗಳಲ್ಲಿನ ಕಾನೂನು ಸುವ್ಯವಸ್ಥೆ ಹೇಗಿದೆ? ಅಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿಯಾಗಿದೆ. ಆದರೆ ಬಿಜೆಪಿ ಮಾತ್ರ ಈ ರಾಜ್ಯಗಳಲ್ಲಿ ಎಲ್ಲವೂ ಸುವ್ಯವಸ್ಥಿತವಾಗಿದೆ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ. ಮಹಾರಾಷ್ಟ್ರ, ಪಂಜಾಬ್, ಪಶ್ಚಿಮಬಂಗಾಳ ಮತ್ತು ರಾಜಸ್ಥಾನದಲ್ಲಿ ಮಾತ್ರ ಸಮಸ್ಯೆಗಳಿವೆ ಎಂದು ಹೇಳುತ್ತಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ