ಇಡುಕ್ಕಿ: ಬೆಕ್ಕನ್ನು ಹುಲಿ ಮರಿ ಎಂದು ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಯುವಕ!
ಹುಲಿ ಮರಿ ಮಾರಾಟಕ್ಕಿದೆ ಎಂಬ ವಾಟ್ಸಪ್ ಸಂದೇಶ ಅರಣ್ಯ ಇಲಾಖೆಗೂ ತಲುಪಿಬಿಟ್ಟಿತ್ತು.
Team Udayavani, Sep 12, 2022, 2:57 PM IST
ಮುನ್ನಾರ್(ಕೇರಳ): ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು ಹುಲಿ ಮರಿ ಎಂದು ಮಾರಾಟ ಮಾಡಲು ಯತ್ನಿಸಿದ ಆರೋಪದಲ್ಲಿ ತಮಿಳುನಾಡು ಮೂಲದ ಯುವಕನೊಬ್ಬನನ್ನು ಕೇರಳದ ಇಡುಕ್ಕಿಯಲ್ಲಿ ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂಧಿದೆ.
ತಮಿಳುನಾಡಿನ ಗಡಿ ಭಾಗದ ಗ್ರಾಮವಾದ ತಿರುವಣ್ಣಾಮಲಾದ ಅರಣಿ ನಿವಾಸಿ ಪಾರ್ಥಿಬನ್ (24ವರ್ಷ) ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ತನ್ನ ಬಳಿ ಮೂರು ತಿಂಗಳ ಮೂರು ಹುಲಿ ಮರಿಗಳಿದ್ದು, ಅವುಗಳನ್ನು ಮಾರಾಟ ಮಾಡುವುದಾಗಿ ಪಾರ್ಥಿಬನ್ ವಾಟ್ಸಪ್ ಮೆಸೇಜ್ ಕಳುಹಿಸಿದ್ದ. ಅಲ್ಲದೇ ಪ್ರತಿ ಹುಲಿ ಮರಿಗೆ 25 ಲಕ್ಷ ರೂಪಾಯಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದ. ಹುಲಿ ಮರಿಯನ್ನು ಖರೀದಿಸಲು ಮನೆಗೆ ಬಂದವರ ಬಳಿಯೂ 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎಂದು ವರದಿ ತಿಳಿಸಿದೆ.
ಹುಲಿ ಮರಿ ಮಾರಾಟಕ್ಕಿದೆ ಎಂಬ ವಾಟ್ಸಪ್ ಸಂದೇಶ ಅರಣ್ಯ ಇಲಾಖೆಗೂ ತಲುಪಿಬಿಟ್ಟಿತ್ತು. ಕೊನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತನ್ನನ್ನು ಹುಡುಕುತ್ತಿದ್ದಾರೆ ಎಂಬ ವಿಷಯ ತಿಳಿದು ಪಾರ್ಥಿಬನ್ ನಾಪತ್ತೆಯಾಗಿದ್ದ. ನಂತರ ಅರಣ್ಯಾಧಿಕಾರಿಗಳು ಪಾರ್ಥಿಬನ್ ಮನೆಯನ್ನು ಶೋಧಿಸಿದಾಗ ಯಾವುದೇ ಹುಲಿಮರಿ ಪತ್ತೆಯಾಗಿಲ್ಲವಾಗಿತ್ತು.
ಸ್ಥಳೀಯ ಪೊಲೀಸರ ನೆರವಿನೊಂದಿಗೆ ಪಾರ್ಥಿಬನ್ ನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಬೆಕ್ಕಿನ ಮರಿಗೆ ಹುಲಿ ಬಣ್ಣ ಬಳಿದಿರುವುದನ್ನು ಒಪ್ಪಿಕೊಂಡಿದ್ದ. ಈ ಪ್ರಕರಣದಲ್ಲಿ ಯಾರೆಲ್ಲಾ ಶಾಮೀಲಾಗಿದ್ದಾರೆ ಎಂಬ ಬಗ್ಗೆ ಅರಣ್ಯಾಧಿಕಾರಿಗಳು ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ