ಬಾವಿಯಲ್ಲಿ ಪತ್ತೆಯಾಯ್ತು 9 ಮೃತದೇಹಗಳು ; ಒಂದು ಕೊಲೆ ಮುಚ್ಚಿಡಲು 9 ಹತ್ಯೆ!


Team Udayavani, May 29, 2020, 3:33 AM IST

ಒಂದು ಕೊಲೆ ಮುಚ್ಚಿಡಲು 9 ಹತ್ಯೆ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಾರಂಗಲ್: ಕಳೆದ ವಾರ ತೆಲಂಗಾಣದ ವಾರಂಗಲ್‌ ಜಿಲ್ಲೆಯ ಬಾವಿಯೊಂದರಲ್ಲಿ ಒಂದೇ ಕುಟುಂಬದ 6 ಮಂದಿ ಸೇರಿದಂತೆ 9 ಮಂದಿಯ ಮೃತದೇಹ ಪತ್ತೆಯಾದ ಘಟನೆ ಈಗ ಸಿನಿಮೀಯ ಮಾದರಿಯಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ಒಂದು ಕೊಲೆಯನ್ನು ಮುಚ್ಚಿಡುವ ಸಲುವಾಗಿ ಈ 9 ಕೊಲೆಗಳು ನಡೆದಿದೆ ಎಂಬ ಮಾಹಿತಿ ತನಿಖೆಯಿಂದ ಬಹಿರಂಗಗೊಂಡಿದ್ದು 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಗೀಸುಗೊಂಡ ಮಂಡಲ್‌ ಗ್ರಾಮದಲ್ಲಿ ನಡೆದ ಘಟನೆಯಿದು. 20 ವರ್ಷದ ಹಿಂದೆ ಪ.ಬಂಗಾಲದಿಂದ ವಲಸೆ ಬಂದಿದ್ದ ಮಕ್ಸೂದ್‌ (48), ಅವರ ಪತ್ನಿ, ಇಬ್ಬರು ಗಂಡು ಮಕ್ಕಳು, ಪುತ್ರಿ ಬುಷ್ಯಾ ಮತ್ತು ಆಕೆಯ 3 ವರ್ಷದ ಪುತ್ರ ಹಾಗೂ ಇತರೆ ಮೂವರ ಶವ ಕಳೆದ ವಾರ ಬಾವಿಯಲ್ಲಿ ಪತ್ತೆಯಾ ಗಿತ್ತು.

ಕೆಲಸವಿಲ್ಲದ ಕಾರಣ ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮೃತದೇಹಗಳಲ್ಲಿ ಗಾಯಗಳು ಪತ್ತೆ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿತ್ತು.

ಮಕ್ಸೂದ್‌ ಸಂಬಂಧಿಯಾಗಿದ್ದ ವಿಚ್ಛೇದಿತ ಮಹಿಳೆ ರಫೀಕಾ (37) ಇತ್ತೀಚೆಗೆ ಇವರ ಮನೆಗೆ ಬಂದು ಕೆಲ ದಿನ ತಂಗಿದ್ದರು. ಮಕ್ಸೂದ್‌ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿಯಲ್ಲೇ ಸಂಜಯ್‌ ಕೂಡ ಕೆಲಸ ಮಾಡುತ್ತಿದ್ದ. ಈತ ರಫೀಕಾ ಜತೆ ಅಕ್ರಮ ಸಂಬಂಧ ಹೊಂದಿದ್ದ.

ಅನಂತರ ರಫೀಕಾ ತನ್ನ ಮೂವರು ಮಕ್ಕಳೊಂದಿಗೆ ಪ್ರತ್ಯೇಕ ಮನೆಯಲ್ಲಿ ಸಂಜಯ್‌ ಜತೆ ಸಂಸಾರ ಆರಂಭಿಸಿದ್ದಳು. ಈ ನಡುವೆ, ಸಂಜಯ್‌ ತನ್ನ ಹದಿ ಹರೆಯದ ಮಗಳ ಮೇಲೆಯೇ ಕಣ್ಣಿಟ್ಟಿರುವ ವಿಚಾರ ರಫೀಕಾಗೆ ಗೊತ್ತಾಗಿ, ತಗಾದೆ ತೆಗೆದಳು.

ಕೊನೆಗೆ ಮಾ. 6ರಂದು ರಫೀಕಾಳನ್ನು ಮದುವೆಯಾಗುವುದಾಗಿ ಪುಸಲಾಯಿಸಿ ರೈಲಲ್ಲಿ ಕರೆದೊಯ್ದ ಸಂಜಯ್, ಆಕೆಗೆ ಮತ್ತು ಬರಿಸುವ ಔಷಧ ನೀಡಿ, ಕತ್ತು ಹಿಸುಕಿ ಕೊಲೆ ಮಾಡಿ, ಶವವನ್ನು ರೈಲಿಂದ ಕೆಳಕ್ಕೆ ಹಾಕಿ ವಾರಂಗಲ್‌ಗೆ ವಾಪಸಾಗಿದ್ದ.

ರಫೀಕಾಳನ್ನು ಸಂಜಯ್‌ ಕೊಲೆ ಮಾಡಿರಬಹುದು ಎಂಬ ಶಂಕೆ ಮಕ್ಸೂದ್‌ ಪತ್ನಿಗೆ ಬಂದಿತ್ತು. ಹೀಗಾಗಿ, ಪೊಲೀಸರಿಗೆ ವಿಚಾರ ತಿಳಿಸುವುದಾಗಿ ಆಕೆ ಸಂಜಯ್‌ ನನ್ನು ಬೆದರಿಸಿದ್ದಳು.

ರಫೀಕಾ ಕೊಲೆ ವಿಚಾರ ಮುಚ್ಚಿಡುವ ಸಲುವಾಗಿ ಸಂಜಯ್, ಕಳೆದ ವಾರ ಆಹಾರದಲ್ಲಿ ನಿದ್ರೆ ಮಾತ್ರೆ ಸೇರಿಸಿ, ಮಕ್ಸೂದ್‌ ಕುಟುಂಬದ ಆರು ಮಂದಿ ಸೇರಿ 9 ಮಂದಿಯನ್ನು ಹತ್ಯೆಗೈದು, ಶವಗಳನ್ನು ಬಾವಿಗೆ ಎಸೆದಿದ್ದಾನೆ. ಆರೋಪಿ ಸಂಜಯ್‌ ವಿಚಾರಣೆ ವೇಳೆ ಈ ವಿಷಯವನ್ನು ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.