ಕಾಶ್ಮೀರಿಗಳಿಗೆ ಬೇಕು ಸ್ವಾತಂತ್ರ್ಯ; ಮುಶರ್ರಫ್ ಸರಿ; ಕೈ ನಾಯಕ ವಿವಾದ


Team Udayavani, Jun 22, 2018, 11:38 AM IST

soz-700.jpg

ಹೊಸದಿಲ್ಲಿ : “ಒಂದೊಮ್ಮೆ ಆಯ್ಕೆಯ ಅವಕಾಶ ಕೊಟ್ಟರೆ ಕಾಶ್ಮೀರಿಗಳು ಸ್ವಾತಂತ್ರ್ಯವನ್ನೇ ಬಯಸುತ್ತಾರೆ ಎಂದು ಈ ಹಿಂದೆ ಪಾಕ್‌ ಸರ್ವಾಧಿಕಾರಿ ಪರ್ವೇಜ್‌ ಮುಶರ್ರಫ್ ಹೇಳಿರುವುದು ಸರಿ” ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸೈಫ‌ುದ್ದೀನ್‌ ಸೋಜ್‌ ಅವರು ಭಾರೀ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ.

ಸೋಜ್‌ ಅವರು ಬರೆದಿರುವ “ಕಾಶ್ಮೀರ್‌ : ಗ್ಲಿಂಪ್‌ಸಸ್‌ ಆಫ್ ಹಿಸ್ಟರಿ ಆ್ಯಂಡ್‌ ದ ಸ್ಟೋರಿ ಆಫ್ ಸ್ಟ್ರಗಲ್‌’ ಎಂಬ ಪುಸ್ತಕ ಮುಂದಿನ ವಾರ ಬಿಡುಗಡೆಯಾಗಲಿದ್ದು ಅದರಲ್ಲಿ ಅವರು “ಸ್ವಾತಂತ್ರ್ಯವೇ ಕಾಶ್ಮೀರಿಗಳ ಮೊದಲ ಆಯ್ಕೆ ಎಂದು ಮುಶರ್ರಫ್ ಸರಿಯಾಗಿಯೇ ಹೇಳಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕಾಶ್ಮೀರಿಗಳು ಪಾಕಿಸ್ಥಾನದ ಜತೆ ಸೇರುವುದನ್ನು ಬಯಸುವುದಿಲ್ಲ; ಅವರ ಮೊದಲ ಆಯ್ಕೆ ಸ್ವಾತಂತ್ರ್ಯ ಎಂದು ಮುಶರ್ರಫ್ ಹೇಳಿದ್ದುದು ಅಂದೂ ಸತ್ಯವಾಗಿತ್ತು; ಇಂದೂ ಸತ್ಯವಾಗಿಯೇ ಉಳಿದಿದೆ. ನಾನು ಕೂಡ ಹಾಗೆಯೇ ಹೇಳುತ್ತೇನೆ; ಆದರೆ ಅದು ಅಸಾಧ್ಯವೆಂದು ನನಗೆ ಗೊತ್ತಿದೆ” ಎಂದು ಸೋಜ್‌ ಎಎನ್‌ಐ ಜತೆಗೆ ಮಾತನಾಡುತ್ತಾ ಹೇಳಿದರು. 

”ಕಾಶ್ಮೀರ ಕುರಿತಾದ ಈ ಮಾತುಗಳನ್ನು ಮುಶರ್ರಫ್ 2007ರಲ್ಲಿ ಉನ್ನತ ಮಟ್ಟ ಪಾಕ್‌ ಅಧಿಕಾರಿಗಳಿಗೆ ಹೇಳಿದ್ದರು. ಮ್ರಾವಲ್ಲದೆ ಕಾಶ್ಮೀರ ಪ್ರಶ್ನೆಗೆ ಇರುವ ಏಕೈಕ ಪರಿಹಾರವೆಂದರೆ ಕಾಶ್ಮೀರಿಗಳು ಬಯಸುವ ಸ್ವಾತಂತ್ರ್ಯವನ್ನು ಒಪ್ಪಿಕೊಳ್ಳುವುದು ಎಂದು ಮುಶರ್ರಫ್ ಪಾಕಿಸ್ಥಾನದ ಉನ್ನತ ಅಧಿಕಾರಿಗಳಿಗೆ ಬಹುತೇಕ ಮನವರಿಕೆ ಮಾಡಿದ್ದರು” ಎಂದು ಸೋಜ್‌ ಹೇಳಿದರು. 

‘ಹೊಸದಿಲ್ಲಿಯಲ್ಲಿನ ಭಾರತ ಸರಕಾರಗಳು ಕಾಶ್ಮೀರ ವಿಷಯದಲ್ಲಿ ಪ್ರಮಾದಗಳನ್ನು ಮಾಡುತ್ತಲೇ ಬಂದಿದ್ದು ಒಟ್ಟು ಪರಿಣಾಮದಲ್ಲಿ ಅವು ಕಾಶ್ಮೀರವನ್ನು ಭಾರತದಿಂದ ದೂರ ಮಾಡಿವೆ’ ಎಂದು ಸೋಜ್‌ ಹೇಳಿದರು. 

ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ “1953ರಿಂದ ಭಾರತ ಸರಕಾರಗಳು ಕಾಶ್ಮೀರ ಪ್ರಶ್ನೆಗೆ ದೃಢವಾದ ಪರಿಹಾರವನ್ನು ಕಂಡುಕೊಳ್ಳುವಲ್ಲಿ ವಿಫ‌ಲವಾಗಿವೆ” ಎಂದು ಸೋಜ್‌ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ.

ಕಾಂಗ್ರೆಸ್‌ ನಾಯಕ ಸೋಜ್‌ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಹಿಂದೆ ಅವರು “ಭಯೋತ್ಪಾದಕ ಬುರ್ಹಾನ್‌ ವಾನಿಯನ್ನು ಮಾತುಕತೆಗಾಗಿಯಾದರೂ ಜೀವಂತ ಇಡಬೇಕಿತ್ತು’ ಎಂದಿದ್ದರಲ್ಲದೆ “ಜಮ್ಮು ಕಾಶ್ಮೀರ ಸಮಸ್ಯೆಗೆ ಭಾರತ ಅಲ್ಲ, ಪಾಕಿಸ್ಥಾನವೇ ಹೊಣೆ’ ಎಂದು ಹೇಳಿದ್ದರು. 

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.