ಸಂಗೀತಗಾರ ಕರಣ್ ಜೋಸೆಫ್ ಮುಂಬೈನಲ್ಲಿ ಆತ್ಮಹತ್ಯೆ
Team Udayavani, Sep 10, 2017, 11:19 AM IST
ಮುಂಬೈ: ಬೆಂಗಳೂರು ಮೂಲದ ಸಂಗೀತಗಾರ ಕರಣ್ ಜೋಸೆಫ್(29) ಎಂಬವರು ಶನಿವಾರ ಮುಂಬೈನ ಬಾಂದ್ರಾದಲ್ಲಿ ಕಟ್ಟಡವೊಂದರ 12ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಲ್ಯಾಟ್ನ ಕಿಟಕಿಯಿಂದ ಜಿಗಿದು ಅವರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಫ್ಲ್ಯಾಟ್ ಅವರ ಸ್ನೇಹಿತ ರಿಷಿ ಶಾ ಎಂಬವರು ಕಾರ್ಯ ನಿರ್ವಹಿಸುತ್ತಿರುವ ಕಂಪನಿಗೆ ಸೇರಿದ್ದು. ಕಳೆದ ತಿಂಗಳಿಂದ ಕರಣ್ ಅವರು ಇದೇ ಫ್ಲ್ಯಾಟ್ನಲ್ಲಿ ವಾಸವಾಗಿದ್ದು, ತೀವ್ರ ಖನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 8.30ರ ವೇಳೆಗೆ ರಿಶಿ ಹಾಗೂ ಇತರೆ ಸ್ನೇಹಿತರೊಂದಿಗೆ ಟಿವಿ ವೀಕ್ಷಿಸುತ್ತಾ ಕುಳಿತಿದ್ದ ಕರಣ್, ದಿಢೀರನೆ ಅಲ್ಲಿಂದ ಹೋಗಿ ಕೆಳಕ್ಕೆ ಜಿಗಿದಿದ್ದಾರೆ. ಈ ಸಮಯದಲ್ಲಿ ಅವರು ಮದ್ಯಪಾನ ಮಾಡಿದ್ದರು ಎಂದು ಹೇಳಲಾಗಿದೆ. ಅವರ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ಮೊಬೈಲ್ ಫೋನ್ ವಶಕ್ಕೆ ಪಡೆದಿರುವ ಪೊಲೀಸರು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಸಾವಿಗೆ ಕಾರಣ ಪತ್ತೆಹಚ್ಚಲು ಯತ್ನಿಸುತ್ತಿದ್ದಾರೆ. ಘಟನೆ ಕುರಿತು ಟ್ವೀಟ್ ಮಾಡಿರುವ ಗಾಯಕ ಮತ್ತು ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ, “ಹೃದಯ ಒಡೆದುಹೋಯಿತು. ದೇಶದ ಖ್ಯಾತ ಸಂಗೀತಗಾರ ಕರಣ್ ಜೋಸೆಫ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ,’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ