Ram temple; ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗಿಯಾದ ಪ್ರಮುಖ ಮೌಲ್ವಿ ವಿರುದ್ಧ ಫತ್ವಾ
ಯಾವುದೇ ಅಪರಾಧ ಮಾಡಿಲ್ಲ ... ನಾನು ಕ್ಷಮೆಯಾಚಿಸುವುದಿಲ್ಲ, ದ್ವೇಷಿಸುವವರು ಪಾಕಿಸ್ಥಾನಕ್ಕೆ ಹೋಗಲಿ
Team Udayavani, Jan 29, 2024, 10:15 PM IST
ಅಯೋಧ್ಯೆ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.
ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ನ ಮುಖ್ಯ ಇಮಾಮ್ ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ತನ್ನ ವಿರುದ್ಧ ‘ಫತ್ವಾ’ ಹೊರಡಿಸಿರುವುದನ್ನು ಖಚಿತಪಡಿಸಿದ್ದಾರೆ. “ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ ಎಂದು ಎಎನ್ಐಗೆ ಪ್ರತಿಕ್ರಿಯಿಸಿದ್ದಾರೆ.
“ನಿನ್ನೆ ಫತ್ವಾ ಹೊರಡಿಸಲಾಗಿದೆ, ಆದರೆ ಜನವರಿ 22 ರ ಸಂಜೆಯಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ … ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ಥಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು”ಎಂದು ಇಲ್ಯಾಸಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ