![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮಗಳ ನಿಕಾಹ್ನಲ್ಲಿ ಮುಸ್ಲಿಂ ತಂದೆಯಿಂದ ದನದ ವಿಶೇಷ ಉಡುಗೊರೆ !
Team Udayavani, Apr 11, 2017, 12:31 PM IST
![Cow special gift-700.jpg](https://www.udayavani.com/wp-content/uploads/2017/04/11/Cow special gift-700-620x354.jpg)
ರೋಹಟಕ್ : ಗೋರಕ್ಷರೆನಿಸಿಕೊಂಡವರು ಜನರ ಮೇಲೆ ಅಲ್ಲಲ್ಲಿ ದಾಳಿ ನಡೆಸುತ್ತಿರುವ ಸುದ್ದಿಗಳನ್ನು ನಾವು ಕೇಳುತ್ತಿರುವ ನಡುವೆಯೇ, ಇಲ್ಲಿನ ಮುಸ್ಲಿಂ ತಂದೆಯೊಬ್ಬರು ತಮ್ಮ ಮಗಳಿಗೆ ಮದುವೆಯ ಸಂದರ್ಭದಲ್ಲಿ ದನವೊಂದನ್ನು ವಿಶೇಷ ಉಡುಗೊರೆಯಾಗಿ ಕೊಟ್ಟಿರುವ ಅಪರೂಪದ ಘಟನೆ ನಡೆದಿದೆ. ಈ ಘಟನೆ ನಡೆದಿರುವುದು ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ .
ಟೈಮ್ಸ್ ಆಫ್ ಇಂಡಿಯಾ ಮಾಡಿರುವ ವರದಿಯ ಪ್ರಕಾರ ಸೋನಿಪತ್ ಜಿಲ್ಲೆಯ ಖರ್ಖೊಡ್ಡ ಗ್ರಾಮದ ನಿವಾಸಿಯಾಗಿರುವ ನೂರ್ ಖಾನ್ ಅವರು ತಮ್ಮ ಮಗಳು ಗುಲ್ಷಾನಾ ಳ ನಿಕಾಹ್ ಸಂದರ್ಭದಲ್ಲಿ ದನವನ್ನು ಉಡುಗೊರೆಯಾಗಿ ನೀಡಿದರು. ದೇಶೀ ತಳಿಯ ದನದ ಈ ಕರುವಿಗೆ ಏನಿಲ್ಲವೆಂದರೂ 11,000 ರೂ.ಗಳಿಂದ 15,000 ರೂ.ಗಳ ಬೆಲೆ ಇದೆ.
“ನನ್ನ ಮಗಳು ಗುಲ್ಷಾನಾ ದನ-ಕರುಗಳನ್ನು ತುಂಬಾ ಪ್ರೀತಿಸುತ್ತಾಳೆ. ತಾನು ಹೋಗಿ ಬರುವ ಹಾದಿಯಲ್ಲಿ ಯಾವುದೇ ದನ ಕರುಗಳನ್ನು ಕಂಡರೂ ಅವುಗಳಿಗೆ ತಿನ್ನಲು ಬೆಲ್ಲ ಇತ್ಯಾದಿಗಳನ್ನು ಕೊಡುತ್ತಿದ್ದಳು. ಹಾಗಾಗಿ ಅವಳಿಗೆ ಮನೆಯ ದನದ ಕರುವನ್ನೇ ಮದುವೆ ಸಂದರ್ಭದಲ್ಲಿ ಉಡುಗೊರೆಯಾಗಿ ಕೊಟ್ಟೆ’ ಎಂದು ತಂದೆ ನೂರ್ ಖಾನ್ ಹೇಳುತ್ತಾರೆ.
ಮಗಳಿಗೆ ಮದುವೆ ಸಂದರ್ಭದಲ್ಲಿ ದನವನ್ನು ಉಡುಗೊರೆಯಾಗಿ ಕೊಟ್ಟ ಪ್ರಸಂಗ ಬಹುಷಃ ಇದೇ ಮೊದಲಿರಬೇಕು ಎನ್ನಲಾಗಿದೆ.
ತನ್ನ ಮನೆಯದ ದನದ ಕರುವನ್ನೇ ತನ್ನ ತಂದೆ ತನಗೆ ನಿಕಾಹ್ನಲ್ಲಿ ಉಡುಗೊರೆಯಾಗಿ ಕೊಟ್ಟಿರುವುದು ಗುಲ್ಗಾನಾಗೆ ತುಂಬಾ ಖುಷಿ ಕೊಟ್ಟಿದೆ. ನಾನಿದನ್ನು ಗಂಡನ ಮನೆಯಲ್ಲಿ ಚೆನ್ನಾಗಿ ಸಾಕುವೆ; ಅಲ್ಲಿ ಎಲ್ಲರನ್ನೂ ಆ ಮೂಲಕ ಖುಷಿಪಡಿಸುವೆ ಎಂದಾಕೆ ಹೇಳುತ್ತಾಳೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.