ಅಸ್ಸಾಂನಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಲ್ಲ; ಮುಖ್ಯಮಂತ್ರಿ ಹಿಮಾಂತ ಶರ್ಮಾ ಬಿಸ್ವಾ
Team Udayavani, Mar 17, 2022, 7:45 AM IST
ಗುವಾಹಟಿ: ಅಸ್ಸಾಂನ ಒಟ್ಟು ಜನಸಂಖ್ಯೆಯ ಪೈಕಿ ಮುಸ್ಲಿಂ ಸಮುದಾಯದವರು ಶೇ.35ರಷ್ಟಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಅವರು ಅಲ್ಪಸಂಖ್ಯಾತರಲ್ಲ ಎಂದು ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ಸಮರ್ಪಿಸುವ ಗೊತ್ತುವಳಿಯಲ್ಲಿ ಮಾತನಾಡಿದ ಅವರು, ಅಧಿಕಾರ ಎನ್ನುವುದು ಹೊಣೆಗಾರಿಕೆಯಿಂದ ಬರುತ್ತದೆ. ರಾಜ್ಯದ ಪ್ರಗತಿಯಲ್ಲಿ ಅವರೂ ಸಹಭಾಗಿಗಳಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
“ಮುಸ್ಲಿಂ ಸಮುದಾಯ ಅಸ್ಸಾಂನ ಒಟ್ಟು ಜನಸಂಖ್ಯೆಯ ಶೇ.35ರಷ್ಟಿದೆ. ಹೀಗಾಗಿ, ಅವರು ರಾಜ್ಯದಲ್ಲಿ ಅಲ್ಪಸಂಖ್ಯಾತರಲ್ಲ. ಇತರೆ ಅಲ್ಪಸಂಖ್ಯಾತರನ್ನು ರಕ್ಷಿಸುವುದು ಅವರ ಕರ್ತವ್ಯವಾಗಿದೆ. ರಾಜ್ಯದ ಜನರು ತಮ್ಮ ಸಂಸ್ಕೃತಿ ದಾಳಿಗೆ ಒಳಗಾಗಲಿದೆ ಎಂಬ ಭೀತಿಯಲ್ಲಿದ್ದಾರೆ. ಸೌಹಾರ್ದತೆ ಎನ್ನುವುದು ಕೊಡು-ಕೊಳ್ಳುವಿಕೆಯಂತೆ. ಮುಸ್ಲಿಮರು ಸಂಕರಿ ಮತ್ತು ಸತ್ತಿರಿಯಾ ಸಂಸ್ಕೃತಿಯ ರಕ್ಷಣೆಯ ಮಾತಾಡಲಿ. ಹತ್ತು ವರ್ಷಗಳ ಹಿಂದೆ ನಾವು ಅಲ್ಪಸಂಖ್ಯಾತರಾಗಿರಲಿಲ್ಲ. ಆದರೆ, ಈಗ ನಾವಾಗಿದ್ದೇವೆ’ ಎಂದು ಹೇಳಿದ್ದಾರೆ.
ಮುಸ್ಲಿಂ ಸಮುದಾಯದ ಜನರು ಪ್ರತಿಪಕ್ಷದಲ್ಲಿದ್ದಾರೆ ಮತ್ತು ಶಾಸಕರಾಗಿದ್ದಾರೆ. ಜತೆಗೆ ಅಧಿಕಾರವನ್ನೂ ಹೊಂದಿದ್ದಾರೆ. ಹೀಗಾಗಿ, ರಾಜ್ಯದ ಬುಡಕಟ್ಟು ಸಮುದಾಯದವರಿಗೆ ಮೀಸಲಾಗಿ ಇರುವ ಹಕ್ಕುಗಳನ್ನು ರಕ್ಷಿಸುವುದೂ ಅವರ ಹೊಣೆಯಾಗಿರುತ್ತದೆ ಎಂದಿದ್ದಾರೆ ಸಿಎಂ ಶರ್ಮಾ. ಅಸ್ಸಾಂನ ಬೋರಾ ಮತ್ತು ಕಲಿತಾ ಸಮುದಾಯವರು ಜಮೀನು ಹೊಂದಿರದೇ ಇದ್ದರೆ, ಇಸ್ಲಾಂ ಮತ್ತು ರಹಮಾನ್ (ಅಸ್ಸಾಂನಲ್ಲಿ ಮುಸ್ಲಿಂ ಜಾತಿಸೂಚಕ ಹೆಸರುಗಳು) ಆ ಜಮೀನುಗಳನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ