![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಉತ್ತರ ಪ್ರದೇಶದಲ್ಲಿ ಮಸೀದಿ ಒಡೆದು ಕುಂಭಮೇಳಕ್ಕಾಗಿ ದಾರಿ ಕೊಟ್ಟರು!
Team Udayavani, Jul 4, 2018, 8:40 AM IST
![100.jpg](https://www.udayavani.com/wp-content/uploads/2018/07/4/100.jpg)
ಅಲಹಾಬಾದ್: ಕುಂಭಮೇಳದ ಸಂಭ್ರಮ ಕ್ಕಾಗಿ ಉತ್ತರ ಪ್ರದೇಶದ ಅಲಹಾ ಬಾದ್ನಲ್ಲಿರುವ ಮುಸಲ್ಮಾನರು ಮಸೀದಿ ಒಡೆದು ಸೋದರ ಪ್ರೇಮ ಮೆರೆದಿದ್ದಾರೆ. ರಸ್ತೆ ಬದಿಯಲ್ಲಿದ್ದ ಮಸೀದಿಗಳ ಗೋಡೆಗಳನ್ನು ಭಾಗಶಃ ಒಡೆದುಹಾಕಲಾಗಿದ್ದು ಈ ಮೂಲಕ ಕುಂಭಮೇಳಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.
2019ರ ಆರಂಭದಲ್ಲಿ ಕುಂಭಮೇಳ ನಡೆಯುತ್ತಿದ್ದು, ಇದಕ್ಕಾಗಿ ಸರ್ಕಾರ ಭರ್ಜರಿ ತಯಾರಿ ನಡೆಸುತ್ತಿದೆ. ರಸ್ತೆ ಅಗಲೀಕರಣವನ್ನೂ ನಡೆಸುತ್ತಿದ್ದು ಇದಕ್ಕೆ ಬೀದಿ ಬದಿಯಲ್ಲಿನ ಮಸೀದಿಗಳು ಅಡ್ಡವಾಗಿದ್ದವು. ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಎಲ್ಲ ಸಮುದಾಯದವರ ಜತೆ ಮಾತುಕತೆ ನಡೆಸಿ ಮನವೊಲಿಕೆ ಮಾಡಿತ್ತು. ಇದಾದ ನಂತರ ಅವರೇ ಸ್ವಯಂ ಪ್ರೇರಣೆ ಯಿಂದ ಮಸೀದಿಯ ಗೋಡೆ ಒಡೆದಿರುವುದ ಲ್ಲದೇ, ರಸ್ತೆ ಅಗಲೀಕರಣಕ್ಕೂ ಅವಕಾಶ ಮಾಡಿಕೊಟ್ಟಿದ್ದಾರೆ.
ಕುಂಭಮೇಳಕ್ಕಾಗಿ ರಸ್ತೆ ಅಗಲೀಕರಣ ಮಾಡುವ ಸರ್ಕಾರದ ನಿರ್ಧಾರದ ಜತೆ ನಾವಿದ್ದೇವೆ. ಹೀಗಾಗಿ ನಾವೇ ರಸ್ತೆ ಅಗಲೀಕರಣಕ್ಕೆ ಬೇಕಾದ ಮತ್ತು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮಸೀದಿ ಭಾಗಗಳನ್ನು ಒಡೆದುಹಾಕುತ್ತಿದ್ದೇವೆ ಎಂದು ಸ್ಥಳೀಯ ಮುಸಲ್ಮಾನರು ಹೇಳಿದ್ದಾರೆ.
ಅದ್ಧೂರಿ ಕುಂಭಮೇಳ: ಉತ್ತರ ಪ್ರದೇಶ ಸರ್ಕಾರ ಕುಂಭಮೇಳವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದೆ. ಕಳೆದ ಡಿಸೆಂಬರ್ನಲ್ಲೇ ಸಿದ್ಧತಾ ಕಾರ್ಯ ಆರಂಭವಾಗಿದ್ದವು. ರಾಜ್ಯಪಾಲ ರಾಮ್ನಾಯಕ್ ಕುಂಭಮೇಳಕ್ಕೆ ಸ್ವಸ್ತಿಕ್ ಲೋಗೋ ಅನಾವರಣ ಮಾಡಿದ್ದರು.
ಯಾವಾಗ ಕುಂಭಮೇಳ?
ಜ. 15 – ಶಾಹಿ ಸ್ನಾನ
ಫೆ.4 – ಮೌನಿ ಅಮಾವಾಸೆ
ಫೆ.10 – ಬಸಂತ್ ಪಂಚಮಿ
2019ರ ಆರಂಭದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಸಜ್ಜಾಗುತ್ತಿರುವ ನಗರ
ದಾರಿ ಬದಿಯ ಮಸೀದಿ ಭಾಗಶಃ ಒಡೆದು ರಸ್ತೆ ನಿರ್ಮಿಸಲು ಅನುವು
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.