ಮುಸ್ಲಿಮರಿಗೆ 150 ರಾಷ್ಟ್ರಗಳಿವೆ, ಹಿಂದೂಗಳಿಗೆ ಭಾರತ ಒಂದೇ !: ಗುಜರಾತ್ ಸಿಎಂ ರೂಪಾನಿ
Team Udayavani, Dec 25, 2019, 9:36 AM IST
ಅಹಮದಾಬಾದ್: “ವಿಶ್ವದ 150 ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಹೋಗಲು ಮುಸ್ಲಿಮರಿಗೆ ಅವಕಾಶವಿದೆ. ಆದರೆ ಹಿಂದೂಗಳಿಗಿರುವುದು ಭಾರತ ದೇಶ ಒಂದು ಮಾತ್ರ” ಎಂದು ಹೇಳುವ ಮೂಲಕ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಅಹಮದಾಬಾದ್ನ ಸಬರಮತಿ ಆಶ್ರಮದಲ್ಲಿ ನಡೆದ ರ್ಯಾಲಿಯಲ್ಲಿ ಅವರು ನೂತನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವಿಷಯದಲ್ಲಿ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಶಯಗಳನ್ನು ಕಾಂಗ್ರೆಸ್ ಗೌರವಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ದೇಶ ವಿಭಜನೆಗೊಂಡಾಗ ಪಾಕಿಸ್ತಾನದಲ್ಲಿ ಶೇ. 22 ರಷ್ಟು ಹಿಂದೂಗಳಿದ್ದರು. ಆದರೆ, ಈಗ ಅತ್ಯಾಚಾರ, ನಿರಂತರ ದೌರ್ಜನ್ಯದಿಂದ ಅಲ್ಲಿನ ಹಿಂದೂಗಳ ಸಂಖ್ಯೆ ಶೇ. 3 ರಷ್ಟಾಗಿದೆ. ಆದ್ದರಿಂದ ಹಿಂದೂಗಳು ಭಾರತಕ್ಕೆ ವಾಪಾಸ್ ಬರಬೇಕಾಗಿದೆ ಎಂದರು. ಈ ತೊಂದರೆಗೀಡಾದ ಹಿಂದೂಗಳಿಗೆ ಸಹಾಯ ಮಾಡಲು ಕಾಂಗ್ರೆಸ್ ಏನು ಮಾಡಬೇಕೋ ಅದನ್ನು ನಾವು ಮಾಡುತ್ತಿದ್ದೇವೆ. ಆದರೆ, ನೀವು ವಿರೋಧಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಸಂಖ್ಯೆ ಶೇ. 2, ಕೆಲ ದಶಕಗಳ ಹಿಂದೆ 2 ಲಕ್ಷ ಹಿಂದೂಗಳು ಹಾಗೂ ಸಿಖ್ಖರು ವಾಸಿಸುತ್ತಿದ್ದ ಅಪ್ಘಾನಿಸ್ತಾನದಲ್ಲಿ ಈಗ ಹಿಂದೂಗಳ ಸಂಖ್ಯೆ 500 ಆಗಿದೆ. ಮುಸ್ಲಿಂರು 150 ರಾಷ್ಟ್ರಗಳಲ್ಲಿ ಏಲ್ಲಿ ಬೇಕಾದರೂ ವಾಸಿಸಬಹುದು ಆದರೆ, ಹಿಂದೂಗಳಿಗೆ ಭಾರತ ಬಿಟ್ಟರೇ ಬೇರೆ ರಾಷ್ಟ್ರವಿಲ್ಲ. ಆದ್ದರಿಂದ ಅವರು ವಾಪಾಸ್ ದೇಶಕ್ಕೆ ಮರಳಿದರೆ ಏನು ತೊಂದರೆ ಎಂದು ರೂಪಾನಿ ಈ ವೇಳೆ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್