ಭಾರತದಲ್ಲಿ ಮುಸ್ಲಿಮರು ಭಯಪಡಬೇಕಾದ ಅಗತ್ಯವೇ ಇಲ್ಲ: ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಪೌರತ್ವ ತಿದ್ದುಪಡಿ ಮಸೂದೆ ಮುಸ್ಲಿಮ್ ಸಮುದಾಯದ ವಿರುದ್ಧವಾಗಿದೆ ಎಂಬುದಾಗಿ ತಪ್ಪು ಮಾಹಿತಿ
Team Udayavani, Dec 11, 2019, 2:07 PM IST
ನವದೆಹಲಿ: ದೇಶದ ಮುಸ್ಲಿಮರು ಭಯಪಡಬೇಕಾದ ಅಗತ್ಯವಿಲ್ಲ. ಅವರು ದೇಶದ ಪ್ರಜೆಗಳಾಗಿಯೇ ಉಳಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಬುಧವಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿದ ನಂತರ ಹೇಳಿದರು.
ಪೌರತ್ವ ತಿದ್ದುಪಡಿ ಮಸೂದೆ ಮುಸ್ಲಿಮ್ ಸಮುದಾಯದ ವಿರುದ್ಧವಾಗಿದೆ ಎಂಬುದಾಗಿ ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ. ಆದರೆ ಈ ಮಸೂದೆ ನೆರೆಯ ದೇಶಗಳ ಅಲ್ಪಸಂಖ್ಯಾತ ಸಮುದಾಯಗಳಿಗೆ ಮಾತ್ರ. ಇದರಿಂದ ಭಾರತದಲ್ಲಿರುವ ಮುಸ್ಲಿಮರಿಗೆ ಯಾವುದೇ ಆತಂಕ ಬೇಕಾಗಿಲ್ಲ ಎಂದು ತಿಳಿಸಿದರು.
ಭಾರತೀಯ ಮುಸ್ಲಿಮರು ಸುರಕ್ಷಿತ. ಅವರು ಯಾವಾಗಲೂ ಸುರಕ್ಷಿತವಾಗಿರಲಿದ್ದಾರೆ. ನಾನು ಭಾರತದ ಮುಸ್ಲಿಮರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ತಪ್ಪು ಮಾಹಿತಿಯ ಜಾಲದಲ್ಲಿ ಬೀಳಬೇಡಿ. ಅಷ್ಟೇ ಅಲ್ಲ ಅವರನ್ನು ತಪ್ಪು ದಾರಿಗೆ ಎಳೆಯಬೇಡಿ. ಅವರು ಭಯರಹಿತವಾಗಿ ಬದುಕಲಿ ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ ಪತ್ತೆ
ಭಾರೀ ಮಳೆಗೆ ಸಿಲುಕಿದ ರೈಲು; ಸಹಾಯಕ್ಕೆ ಧಾವಿಸಿದ ಭಾರತೀಯ ವಾಯುಪಡೆ!
ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ ವಿಜಯೇಂದ್ರ ಹೆಸರು; ವರಿಷ್ಠರತ್ತ ಎಲ್ಲರ ಚಿತ್ತ
ಜನರ ಕಡೆ ಕಾಂಗ್ರೆಸ್ ನಡಿಗೆ; ನವ ಸಂಕಲ್ಪಗಳೊಂದಿಗೆ ಜನಸಂಪರ್ಕಕ್ಕೆ ಕಾಂಗ್ರೆಸ್ ಸಿದ್ಧ
ದೇಸಿ ಮಕ್ಕಳ ಮೊಬೈಲ್ ಪ್ರೌಢಿಮೆ; ವಿಶ್ವದಲ್ಲಿ ಭಾರತವೇ ಮೊದಲೆಂದ ಮ್ಯಾಕೆಫೀ ವರದಿ