ಉತ್ತರ ಪ್ರದೇಶ:ಹಾಸ್ಟೆಲ್ನಲ್ಲಿ 70 ವಿದ್ಯಾರ್ಥಿನಿಯರ ಬೆತ್ತಲೆ ಪರೇಡ್
Team Udayavani, Mar 31, 2017, 10:56 AM IST
ಮುಜಾಫರ್ನಗರ : ಇಲ್ಲಿ ನಡೆದ ಅಘಾತಕಾರಿ ಘಟನೆಯೊಂದರಲ್ಲಿ ವಿದ್ಯಾರ್ಥಿನಿಯರ ವಸತಿ ಶಾಲೆಯೊಂದರಲ್ಲಿ ಋತುಸ್ರಾವ ಪರೀಕ್ಷಿಸಲು ವಾರ್ಡನ್ 70 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಬೆತ್ತಲೆ ಪರೇಡ್ ನಡೆಸಿ ದಾರ್ಷ್ಟ್ಯ ಮೆರೆದಿದ್ದಾಳೆ.
ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಭಾನುವಾರ ಈ ಹೇಯ ಘಟನೆ ನಡೆದಿದೆ. ಬಾತ್ರೂಂ ಮತ್ತು ನೆಲದ ಮೇಲೆ ರಕ್ತದ ಕಲೆಗಳು ಕಂಡು ಬಂದ ಹಿನ್ನಲೆಯಲ್ಲಿ ವಾರ್ಡನ್ ಎಲ್ಲಾ ವಿದ್ಯಾರ್ಥಿನಿಯರನ್ನು ಒಂದೆಡೆ ಸೇರಿಸಿ ಎಲ್ಲರೂ ಬಟ್ಟೆಗಳನ್ನು ಬಿಚ್ಚಿಡುವಂತೆ ಬೆದರಿಸಿ ಪರೀಕ್ಷೆ ನಡೆಸಿದ್ದಾಳೆ ಎಂದು ಹೇಳಲಾಗಿದೆ.ಈ ಬಗ್ಗೆ ವಿದ್ಯಾರ್ಥಿನಿಯರು ಮತ್ತು ಪೋಷಕರು ವಾರ್ಡನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದಾರೆ.
ಈಗಾಗಲೇ ವಾರ್ಡನ್ಳನ್ನು ಸಂಸ್ಪೆಂಡ್ ಮಾಡಲಾಗಿದ್ದು,ಆಕೆ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾಳೆ. ‘ಬಾತ್ರೂಂ ಮತ್ತು ನೆಲದ ಮೇಲೆ ರಕ್ತದ ಕಲೆಗಳಿದ್ದವು.ವಿದ್ಯಾರ್ಥಿನಿಯರ ಆರೋಗ್ಯದ ಕಾಳಜಿ ವಹಿಸಿ ಪರೀಕ್ಷೆ ನಡೆಸಿದೆ. ಸಣ್ಣ ಪ್ರಾಯದ ಬಾಲಕಿಯರು ಬಹಿರಂಗವಾಗಿ ಹೇಳಿಕೊಳ್ಳುವುದಿಲ್ಲ..ಹೀಗಾಗಿ ನಾನು ಏನಾದರು ಸಮಸ್ಯೆ ಇದೆಯಾ ಎಂದು ಕೇಳಿದೆ’ ಎಂದಿದ್ದಾಳೆ.
‘ನಾನು ತುಂಬಾ ಶಿಸ್ತಿನ ವಾರ್ಡನ್ ಆಗಿದ್ದು, ಓದಿನ ವಿಚಾರದಲ್ಲಿ ಎಲ್ಲರನ್ನೂ ಹಿಡಿದಿಡುತ್ತಿದ್ದೆ. ಹೀಗಾಗಿ ವಿದ್ಯಾರ್ಥಿನಿಯರು ನನ್ನನ್ನು ದ್ವೇಷಿಸುತ್ತಾರೆ. ನನ್ನನ್ನು ಹೊರ ಹಾಕುವ ದುರುದ್ದೇಶದಿಂದ ಬೇರೆ ಸಿಬಂದಿಗಳು ವಿದ್ಯಾರ್ಥಿಗಳನ್ನು ಎತ್ತಿ ಕಟ್ಟಿ ಘಟನೆಯನ್ನು ದೊಡ್ಡದು ಮಾಡಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ