ನನ್ನ ಜೀವಕ್ಕೆ ಅಪಾಯವಿದೆ; ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ನೂಪುರ್
Team Udayavani, Jun 20, 2022, 8:35 PM IST
ಕೋಲ್ಕತಾ: ಬಿಜೆಪಿಯಿಂದ ಅಮಾನತುಗೊಂಡಿರುವ, ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಸೋಮವಾರ, ತನ್ನ ಜೀವಕ್ಕೆ ಅಪಾಯವಿದೆ ಎಂದು ಕೋಲ್ಕತ್ತಾ ಪೊಲೀಸರ ಎದುರು ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ.
ಸುದ್ದಿ ಸಂಸ್ಥೆಯ ಮೂಲಗಳ ಪ್ರಕಾರ, ನೂಪುರ್ ಈ ಸಂಬಂಧ ಕೋಲ್ಕತಾ ಪೊಲೀಸರಿಗೆ ಇಮೇಲ್ ಕಳುಹಿಸಿದ್ದಾರೆ. ನಾಲ್ಕು ವಾರಗಳ ನಂತರ ನರಕೊಂಡ ಪೊಲೀಸ್ ಠಾಣೆಗೆ ಹಾಜರಾಗಲು ಸಾಧ್ಯವಾಗುತ್ತದೆ ಎಂದು ಆ ಇಮೇಲ್ನಲ್ಲಿ ತಿಳಿಸಿದ್ದಾರೆ. ಆದರೆ, ಅವರಿಗೆ ಮುಂದಿನ ದಿನಾಂಕದಂದು ಪೊಲೀಸರು ಮಾಹಿತಿ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ತಿಳಿದಿಲ್ಲ.
ನೂಪುರ್ ಅವರ ಪ್ರವಾದಿ ಕುರಿತಾಗಿ ವಿವಾದಾತ್ಮಕ ಹೇಳಿಕೆಗಳ ನಂತರ, ದೇಶದ ವಿವಿಧ ಭಾಗಗಳಲ್ಲಿ ಆಕ್ರೋಶದ ಬೆಂಕಿಎದ್ದಿತ್ತು. ಪಶ್ಚಿಮ ಬಂಗಾಳದ ಕೋಲ್ಕತಾ ಸೇರಿದಂತೆ ರಾಜ್ಯದ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್ಐಆರ್ ದಾಖಲಾಗಿದೆ. ಒಂದು ದೂರಿನ ಆಧಾರದ ಮೇಲೆ ಜೂನ್ 20 ರೊಳಗೆ ಖುದ್ದು ಹಾಜರಾಗುವಂತೆ ನರಕೊಂಡ ಪೊಲೀಸ್ ಠಾಣೆ ನೂಪುರ್ಗೆ ಸೂಚಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 41ಎ ಅಡಿಯಲ್ಲಿ ನೂಪುರ್ಗೆ ನೋಟಿಸ್ ಕಳುಹಿಸಲಾಗಿದೆ. ಅದನ್ನೇ ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್