ವಿಮಾನ ದುರಂತದಲ್ಲೇ ನೇತಾಜಿ ಸಾವು: ಕೇಂದ್ರ
Team Udayavani, Jun 1, 2017, 2:12 AM IST
ಹೊಸದಿಲ್ಲಿ: ನೇತಾಜಿ ಸುಭಾಶ್ಚಂದ್ರ ಬೋಸ್ ಅವರು ಮೃತಪಟ್ಟಿದ್ದು ಹೇಗೆ? 1945ರ ಆಗಸ್ಟ್ 18ರಂದು ನಡೆದ ವಿಮಾನ ದುರಂತದಲ್ಲಿ. ಹೌದು. ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಕೇಂದ್ರ ಸರಕಾರವೇ ಈ ಉತ್ತರ ನೀಡಿದೆ. ನೇತಾಜಿ ಅವರ ಸಾವಿಗೆ ಸಂಬಂಧಿಸಿ ವಿವಿಧ ಸಮಿತಿಗಳು ನೀಡಿರುವ ವರದಿಗಳನ್ನು ಪರಿಗಣಿಸಿ, ಅವರು ವಿಮಾನ ದುರಂತದಲ್ಲೇ ಮೃತಪಟ್ಟಿದ್ದು ಹೌದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಆದರೆ, ಸರಕಾರದ ಈ ಪ್ರತಿ ಕ್ರಿಯೆ ಬಗ್ಗೆ ನೇತಾಜಿ ಕುಟುಂಬ ಸದಸ್ಯರು ಕಿಡಿಕಾರಿದ್ದಾರೆ. ‘ಇದು ಸರಕಾರದ ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಪ್ರಕರಣವು ಇನ್ನೂ ಇತ್ಯರ್ಥಗೊಂಡಿರದೇ ಇರುವಾಗ ಇಂತಹುದೊಂದು ಉತ್ತರವನ್ನು ಸರಕಾರ ಹೇಗೆ ನೀಡಲು ಸಾಧ್ಯ’ ಎಂದು ನೇತಾಜಿ ಅವರ ಸಂಬಂಧಿ, ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು