ಶಾಸಕರ ಆರೋಪ ನಿರಾಧಾರ ಎಂದ ನಡ್ಡಾ
Team Udayavani, Jul 15, 2019, 3:00 AM IST
ರಾಂಚಿ: ಕರ್ನಾಟಕದಲ್ಲಿ ಶಾಸಕರ ಖರೀದಿಯಲ್ಲಿ ಪಕ್ಷ ತೊಡಗಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪವನ್ನು ಬಿಜೆಪಿ ತಿರಸ್ಕರಿಸಿದೆ. ರಾಂಚಿಯಲ್ಲಿ ಭಾನುವಾರ ಮಾತನಾಡಿದ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ಅಧ್ಯಕ್ಷರು ಮಾಡಿರುವ ಆರೋಪ ಆಧಾರರಹಿತ. ಅಲ್ಲಿನ ಬೆಳವಣಿಗೆಗಳು ಏನಿದ್ದರೂ, ಆ ಪಕ್ಷದ ಆಂತರಿಕ ವಿಚಾರ. ಕಾಂಗ್ರೆಸ್ ಅಧ್ಯಕ್ಷರೇ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇದಾದ ಬಳಿಕ ಹಲವರು ತಮ್ಮ ಹುದ್ದೆಗಳನ್ನು ಬಿಡುತ್ತಿದ್ದಾರೆ ಎಂದು ಹೇಳಿದ್ದಾರೆ. ಗೋವಾ ಮತ್ತು ಕರ್ನಾಟಕದಲ್ಲಿನ ಬೆಳವಣಿಗೆಗಳು ಕಾಂಗ್ರೆಸ್ ಮುಕ್ತ ಭಾರತ ಸೂಚನೆಯೇ ಎಂದು ಕೇಳಿದಾಗ ನಡ್ಡಾ “ಕಾಂಗ್ರೆಸ್ ಮುಕ್ತ ಭಾರತ ಎಂದರೆ ಆ ಪಕ್ಷ ಹೊಂದಿರುವ ಸಂಸ್ಕೃತಿ ಮತ್ತು ಭ್ರಷ್ಟಾಚಾರವನ್ನು ನಿವಾರಿಸುವುದು ಎಂದು ಅರ್ಥ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ