Smartphone: ಫೋನ್ ಖರೀದಿಸಲು ಹಣ ನೀಡದ ತಾಯಿಯನ್ನೇ ಕತ್ತು ಹಿಸುಕಿ ಕೊಂದು ನಾಟಕವಾಡಿದ ಮಗ
Team Udayavani, Oct 21, 2023, 11:14 AM IST
ನಾಗ್ಪುರ: ಸ್ಮಾರ್ಟ್ಫೋನ್ ಖರೀದಿಸಲು ಹಣ ನೀಡಲಿಲ್ಲವೆಂದು ಮಗನೆ ತನ್ನ ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ನಾಗ್ಪುರದಲ್ಲಿ ನಡೆದಿದೆ.
ಕಮಲಾಬಾಯಿ ಬದ್ವೈಕ್ (47) ಮೃತಪಟ್ಟ ಮಹಿಳೆ.
28 ವರ್ಷದ ರಮಾನಾಥ್ ಕೊಲೆ ಆರೋಪಿಯಾಗಿದ್ದು ಸದ್ಯ ಪೋಲೀಸರ ವಶದಲ್ಲಿದ್ದಾನೆ.
ಘಟನೆ ವಿವರ: ರಮಾನಾಥ್ ತಾನು ಸ್ಮಾರ್ಟ್ ಫೋನ್ ಖರೀಸಿಡಿಸಲು ತಾಯಿ ಬಳಿ ಹಣ ಕೇಳಿದ್ದಾನೆ ಇದಕ್ಕೆ ತಾಯಿ ಕಮಲಾಬಾಯಿ ಒಪ್ಪಲಿಲ್ಲ ಇದರಿಂದ ಕುಪಿತಗೊಂಡ ಮಗ ಚೂಡಿದಾರದ ಶಾಲ್ ನಿಂದ ತಾಯಿಯ ಕುತ್ತಿಗೆಗೆ ಬಿದಿದಿದ್ದಾನೆ ಇದರಿಂದ ಪ್ರಜ್ಞೆ ತಪ್ಪಿ ಬಿದ್ದ ತಾಯಿಯನ್ನು ಕಂಡು ಗಾಬರಿಗೊಂಡ ರಮಾನಾಥ್ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲದೆ ತಾಯಿಯನ್ನು ಆಸ್ಪತ್ರೆಗೆ ಸಾಗಿಸುವ ವಿಚಾರ ರಮಾನಾಥ್ ತನ್ನ ಸಹೋದರನ ಬಳಿ ಹೇಳಿದ್ದಾನೆ, ತಾಯಿಯ ಅರೋಗ್ಯ ಸರಿ ಇಲ್ಲ ಹಾಗಾಗಿ ಅವರನ್ನು ಆಸ್ಪತ್ರೆಗೆ ಕರೆತಂದಿರುವುದಾಗಿ ಸಹೋದರ ದೀಪಕ್ ಬಳಿ ಹೇಳಿದ್ದಾನೆ ಅಡಗಿ ಸ್ವಲ್ಪ ಹೊತ್ತಿನ ಬಳಿಕ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಕರೆ ಮಾಡಿ ಹೇಳಿದ್ದಾನೆ ಇದರಿಂದ ಗಾಬರಿಗೊಂಡ ದೀಪಕ್ ಕೂಡಲೇ ಆಸ್ಪತ್ರೆಗೆ ದಾವಿಸಿದ್ದಾನೆ.
ಆಸ್ಪತ್ರೆಗೆ ತೆರಳಿ ತಾಯಿಯನ್ನು ಪರಿಶೀಲಿಸಿದಾಗ ತಾಯಿಯ ಕತ್ತಿನ ಬಳಿ ಗಾಯದ ಕಲೆಗಳು ಕಂಡುಬಂದಿತ್ತು ಅಲ್ಲದೆ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳು ಕಾಣೆಯಾಗಿತ್ತು ಇದರಿಂದ ಅನುಮಾನಗೊಂಡ ದೀಪಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ, ಪ್ರಕರಣದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಮೃತ ಮಹಿಳೆಯ ಮಗ ರಮಾನಾಥ್ ನನ್ನೇ ತನಿಖೆಗೆ ಒಳಪಡಿಸಿದ್ದಾರೆ ಈ ವೇಳೆ ರಮಾನಾಥ್ ತಾನು ಮೊಬೈಲ್ ಖರೀದಿಸಲು ಅಮ್ಮನ ಬಳಿ ಹಣ ಕೇಳಿದ್ದೆ ಅದಕ್ಕೆ ಅಮ್ಮ ಒಪ್ಪಲಿಲ್ಲ ಕೋಪದಿಂದ ಶಾಲ್ ನಿಂದ ಕುತ್ತಿಗೆಗೆ ಬಿಗಿದು ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ರಮಾನಾಥ್ ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Isro Gaganyaan Test Flight : ಇಸ್ರೋ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಯಶಸ್ವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್