ನಾಯ್ಡು ಪರಿಶೀಲನೆ ವಿವಾದ
Team Udayavani, Jun 16, 2019, 7:44 AM IST
ವಿಜಯವಾಡ: ದಿಲ್ಲಿಗೆ ಪ್ರಯಾಣ ಬೆಳೆಸಲು ಶುಕ್ರವಾರ ರಾತ್ರಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಜನಸಾಮಾನ್ಯರಂತೆ ಪರಿಶೀಲನೆ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ. ಮಾವೋವಾದಿಗಳ ಟಾರ್ಗೆಟ್ ಆಗಿರುವ ಅವರಿಗೆ ಕೇಂದ್ರ ಸರಕಾರ ಝೆಡ್ ಪ್ಲಸ್ ಭದ್ರತೆ ನೀಡಿದೆ. ಅಂಥ ಭದ್ರತೆ ಇರುವವರಿಗೆ ವಿಮಾನ ನಿಲ್ದಾಣದಲ್ಲಿ ವಿಮಾನ ಇರುವ ಕಡೆಗೆ ನೇರವಾಗಿ ತಮ್ಮ ವಾಹನಗಳಲ್ಲಿ ತೆರಳಿ ವಿಮಾನ ಹತ್ತಬಹುದು.
ಆದರೆ, ಶುಕ್ರವಾರ ರಾತ್ರಿ ವಿಮಾನ ನಿಲ್ದಾಣದ ಮುಖ್ಯ ದ್ವಾರದಲ್ಲೇ ನಾಯ್ಡು ಅವರ ಭದ್ರತಾ ವಾಹನಗಳನ್ನು ತಡೆಯಲಾಗಿದ್ದು, ಅವರನ್ನು ಸಾಮಾನ್ಯರಂತೆ ಪರಿಶೀಲನೆಗೊಳಪಡಿಸಲಾಯಿತು. ಆಅನಂತರ, ಟರ್ಮಿನಲ್ ಮೂಲಕ ಸಾಗುವ ಬಸ್ನಲ್ಲಿ ಜನಸಾಮಾನ್ಯರ ಜತೆ ವಿಮಾನದ ಕಡೆ ಕರೆದೊಯ್ಯಲಾಯಿತು ಎನ್ನಲಾಗಿದೆ. ಇದನ್ನು ತೀವ್ರವಾಗಿ ಟೀಕಿಸಿರುವ ಟಿಡಿಪಿ, ನಾಯ್ಡು ಅವರನ್ನು ನಡೆಸಿಕೊಂಡಿರುವ ರೀತಿ ‘ಅಧಿಕಾರ ದರ್ಪದ ಪ್ರತೀಕ’ ಎಂದು ಕರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ