ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
Team Udayavani, May 19, 2022, 7:20 AM IST
ಹೊಸದಿಲ್ಲಿ: ದಿಲ್ಲಿಯ ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನ ಮಂಡಳಿ (ಸಿಎಸ್ಐಆರ್) ಹಾಗೂ ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟ ರೀಸ್ (ಎನ್ಎಎಲ್) ಜಂಟಿಯಾಗಿ ತಯಾರಿಸಿರುವ “ಹನ್ಸ- ಎನ್ಜಿ’ ಎಂಬ 2 ಆಸನ ಸಾಮರ್ಥ್ಯದ ತರಬೇತಿ ವಿಮಾನದ ಯಶಸ್ವಿ ಪ್ರಯೋಗ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಕ್ಷಣ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಏರೋ ನಾಟಿಕಲ್ ಪರೀಕ್ಷಾ ವಲಯದಲ್ಲಿ (ಎಟಿಆರ್) ಬುಧವಾರ ನಡೆಯಿತು.
8 ಸಾ.ಅಡಿ ಎತ್ತರದಲ್ಲಿ ಹಾರಾಟ
ಏರ್ಕ್ರಾಫ್ಟ್ಆ್ಯಂಡ್ ಸಿಸ್ಟಮ್ಸ್ ಟೆಸ್ಟಿಂಗ್ ಎಸ್ಟಾಬ್ಲಿಷ್ ಮೆಂಟ್ (ಎಎಸ್ಟಿಇ) ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ವಿಂಗ್ ಕಮಾಂಡರ್ಗಳಾದ ಕೆ.ವಿ. ಪ್ರಕಾಶ್ ಹಾಗೂ ಎನ್ಡಿಎಸ್ ರೆಡ್ಡಿ ಈ ವಿಮಾನವನ್ನು ಪರೀಕ್ಷೆಗೆ ಒಳಪಡಿಸಿದರು. ಇವರು ವಿಮಾನವನ್ನು ಭೂಮಿಯಿಂದ 7ರಿಂದ 8 ಸಾವಿರ ಅಡಿ ಎತ್ತರಕ್ಕೆ ಕೊಂಡೊಯ್ದು, ಅಲ್ಲಿ ಗಂಟೆಗೆ 60ರಿಂದ 70 ನಾಟ್ ವೇಗದಲ್ಲಿ ಚಲಾಯಿಸಿದರು.
ಇದರ ಇಂಧನ ಕ್ಷಮತೆ ಹೆಚ್ಚಾಗಿದೆ. ಅಲ್ಲದೆ ಇದರ ನಿರ್ವಹಣ ವೆಚ್ಚವೂ ಕಡಿಮೆಯಾಗಿದ್ದು, ಇದನ್ನು ವಾಣಿಜ್ಯ ಉದ್ದೇಶಕ್ಕೂ ಬಳಸಬಹುದು. ಆದ್ದರಿಂದಕ್ಕೆ ಇದಕ್ಕೆ ಬೇಡಿಕೆ ಸಲ್ಲಿಸಿ ದೇಶದ ಹಲವಾರು ಫ್ಲೈಯಿಂಗ್ ಕ್ಲಬ್ಗಳು ಕೇಂದ್ರಕ್ಕೆ ಪತ್ರ ಬರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅತಿ ಪ್ರಮುಖ ಹಂತವಿದು!
ಈ ವಿಮಾನವನ್ನು ಅಧಿಕೃತ ತರ ಬೇತಿ ಗಾಗಿ ಬಳಸಬೇಕೆಂದರೆ ಅದಕ್ಕೆ ನಾಗರಿಕ ವಿಮಾನ ಸೇವೆಗಳ ಮಹಾ ನಿರ್ದೇಶಕರ ಕಚೇರಿಯಿಂದ (ಡಿಜಿಸಿಎ) ಅನುಮತಿ ಪತ್ರ ಅಗತ್ಯ. ಆ ಅನುಮತಿ ಸಿಗಬೇಕಿದ್ದರೆ ಈ ಪರೀಕ್ಷೆ ಅಗತ್ಯವಾಗಿತ್ತು. ಅದರಲ್ಲೂ, ವಿಮಾನವು ಹಾರಾಡುತ್ತಿರುವಾಗಲೇ ಇದರ ಎಂಜಿನ್ನ ಇನ್-ಫ್ಲೈಟ್ ಡಿಲೈಟ್ ಎಂಬ ಪರೀಕ್ಷೆ ನಡೆಸಲಾಗುತ್ತದೆ. ಅದು ತುಂಬಾ ನಿರ್ಣಾಯಕ ಹಂತದ್ದು ಎಂದು ಹೇಳಲಾಗಿದೆ. ಆ ಎಲ್ಲ ದೃಷ್ಟಿಯಿಂದ, ಪರೀಕ್ಷೆಯಲ್ಲಿ ಇದು ಉತ್ತೀರ್ಣವಾಗಿರುವುದೊಂದು ಮೈಲುಗಲ್ಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್