ಇನ್ನಷ್ಟು ಸ್ಥಳಗಳಿಗೆ ಹೆಸರು: ಚೀನಾ


Team Udayavani, Apr 22, 2017, 3:45 AM IST

China.jpg

ಬೀಜಿಂಗ್‌: ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ ಮರುನಾಮಕರಣ ಮಾಡಿ ಅಂತರ್ಜಾಲಗಳಲ್ಲಿ ಹರಿಬಿಟ್ಟ ಚೀನಾ, ಭಾರತದಿಂದ ತೀವ್ರ ಆಕ್ಷೇಪ ವ್ಯಕ್ತವಾದರೂ ಮತ್ತೆ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. 

ಅರುಣಾಚಲ ಪ್ರದೇಶ ನಮ್ಮದು. ಮರುನಾಮಕರಣ ಮಾಡುವ ಕಾನೂನಾತ್ಮಕ ಹಕ್ಕು ನಾವು ಹೊಂದಿದ್ದೇವೆ ಎಂದು ಹೇಳಿಕೊಂಡಿದೆ. ಈ ಮೂಲಕ ದಕ್ಷಿಣ ಟಿಬೆಟ್‌ ನಮ್ಮದು ಎನ್ನುವುದನ್ನು ಚೀನಾ ಮತ್ತೂಮ್ಮೆ ಪ್ರತಿಪಾದಿಸಿದೆ. ಜತೆಗೆ ಶೀಘ್ರದಲ್ಲಿಯೇ ಅರುಣಾಚಲ ಪ್ರದೇಶದ ಇನ್ನೂ ಹೆಚ್ಚಿನ ಸ್ಥಳಗಳಿಗೆ ತಮ್ಮದೇ ಹೆಸರುಗಳನ್ನು ಇರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ವಕ್ತಾರ ಲು ಕಾಂಗ್‌ ಹೇಳಿದ್ದೇನು?: ಅರುಣಾಚಲದ ಕೆಲ ಸ್ಥಳಗಳಿಗೆ ಹೆಸರಿಟ್ಟ ಬಗ್ಗೆ ಆಕ್ಷೇಪಿಸಿರುವ ಕೇಂದ್ರ ಸರ್ಕಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಇಲಾಖೆ ವಕ್ತಾರ ಲು ಕಾಂಗ್‌ ಭಾರತ-ಚೀನಾ ಗಡಿಯಲ್ಲಿನ ಈಶಾನ್ಯ ಭಾಗ ಚೀನಾಕ್ಕೆ ಸೇರಿದ್ದು. ಇದು ನಿಶ್ಚಿತ ಹಾಗೂ ಅಪ್ಪಟ ಸತ್ಯ. ಅಲ್ಲದೆ ಇದು ಚೀನಾದ ಕಾನೂನುಬದ್ಧ ಹಕ್ಕು. ಜನಾಂಗಕ್ಕೆ ಸಂಬಂಧಿಸಿದ ಹೆಸರನ್ನು ಆಧುನಿಕವಾಗಿ ಹೇಗೆ ಹೇಳಲಾಗುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಮರುನಾಮಕರಣ ಮಾಡಿದ್ದೇವೆ. ಇದನ್ನು ಬದಲಾಯಿಸಲು ಸಾಧ್ಯವೇ ಇಲ್ಲ’ ಎಂದಿದ್ದಾರೆ. 

ಭಾರತ-ಚೀನಾ ಗಡಿ ವಿವಾದ ಬಗೆ ಹರಿಸಿಕೊಳ್ಳಲು 19 ಸುತ್ತಿನ ಮಾತುಕತೆ ನಡೆದಿದ್ದು, ಮತ್ತೆ ಮಾತುಕತೆಗೆ ಮುಂದಾಗಬೇಕಾದ ನಿವಾರ್ಯತೆ ಚೀನಾಕ್ಕಿಲ್ಲ ಎಂದಿದ್ದಾರೆ.

ಗ್ಲೋಬಲ್‌ ಟೈಮ್ಸ್‌ ಎಚ್ಚರಿಕೆ: ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ ಲೇಖನವೊಂದನ್ನು ಪ್ರಕಟಿಸಿದ್ದು, ಈ ಮೂಲಕ ಅರುಣಾಚಲ ಪ್ರದೇಶ ಭಾರತಕ್ಕೆ ಎಚ್ಚರಿಕೆ ನೀಡಿದೆ. ಭಾರತ ದಲೈ ಲಾಮಾ ಜತೆಗಿನ ಸಂಬಂಧ, ಒಡನಾಟವನ್ನೇ ಅಸ್ತ್ರವನ್ನಾಗಿ ಉಪಯೋಗಿಸಿಕೊಂಡು “ಸಣ್ಣಾಟ’ ಅರ್ಥಾತ್‌ ಸಣ್ಣ ತನ ಪ್ರದರ್ಶಿಸಿದರೆ ಮುಂದೊಂದು ದಿನ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದೆ.

ಭಾರತ ಸಂಪರ್ಕ ಸೇತುವಾಗಲಿ: ಲಿಯೂ 
ಇಷ್ಟೆಲ್ಲಾ ಕ್ಯಾತೆ, ತರ್ಲೆಯ ನಡುವೆಯೂ ಚೀನಾ ಶುಕ್ರವಾರ ಭಾರತದೊಂದಿಗಿನ ಸೌಹಾರ್ದತೆಯ ಬಗ್ಗೆ ಸೊಲ್ಲೆತ್ತಿದೆ. ಯುರೋಪ್‌ ಜತೆಗಿನ ಏಷ್ಯಾ ರಾಷ್ಟ್ರಗಳ ಸಂಪರ್ಕ ಸಾಧನೆಗೆ ಭಾರತ ಮಹತ್ವದ ಸೇತುವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಹೇಳಿರುವ ಚೀನಾ ರಾಯಭಾರಿ ಕಚೇರಿ ಸಚಿವ ಲಿಯೂ ಜಿನ್‌ಸಾಂಗ್‌, “ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ ಒಂದು ತಡೆಯಾಗಿ ಪರಿಣಮಿಸಿದೆ. ಇದು ಪರಿಹಾರಗೊಳ್ಳಬೇಕಿದೆ ಎಂದಿದ್ದಾರೆ. ಅಲ್ಲದೆ, ಭಾರತ ಪ್ರಮುಖ ಮಿತ್ರ ರಾಷ್ಟ್ರಗಳಲ್ಲಿ ಒಂದಾಗಿದೆ. ಇಂದು, ಮುಂದು, ಎಂದೆಂದೂ ಈ ಬಾಂಧವ್ಯ ಕಾಯ್ದುಕೊಂಡು ಹೋಗಬೇಕಿದೆ. ಯಾವುದೇ ಅಂಜಿಕೆ ಇಲ್ಲದೇ ಒಕ್ಕೂಟ ವ್ಯವಸ್ಥೆಯ ಚೀನಾದ ಆಹ್ವಾನಕ್ಕೆ ಭಾರತ ಕೈಜೋಡಿಸಬೇಕಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ ನಿರ್ಮಾಣ ಹಿನ್ನೆಲೆಯಲ್ಲಿ ಭಾರತ ಇದಕ್ಕೆ ಹಿಂದೇಟು ಹಾಕಬಾರದು ಎಂದಿದ್ದಾರೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.