ಸಿಖ್ಖರ ಮೆರವಣಿಗೆಗೆ ಅನುಮತಿ ನಕಾರ, ಖಡ್ಗದಿಂದ ದಾಳಿ, ನಾಲ್ವರು ಪೊಲೀಸರಿಗೆ ಗಾಯ
ಸಿಖ್ ಗುಂಪು ಖಡ್ಗದೊಂದಿಗೆ ಬ್ಯಾರಿಕೇಡ್ ದೂಡಿ ಪೊಲೀಸರ ಮೇಲೆ ದಾಳಿ ನಡೆಸಿರುವುದು ವೀಡಿಯೊದಲ್ಲಿ ಸೆರೆಯಾಗಿದೆ
Team Udayavani, Mar 30, 2021, 12:28 PM IST
ಮುಂಬೈ: ಖಡ್ಗಧಾರಿ ಸಿಖ್ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಗುರುದ್ವಾರ ಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಜಿಗಿತ, ನಿಫ್ಟಿ 14,650ಕ್ಕೆ ಏರಿಕೆ
ರಾಜ್ಯದಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದಾಗ ಖಡ್ಗಧಾರಿ ಸಿಖ್ ಪ್ರತಿಭಟನಾಕಾರರು ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.
ಘಟನೆಗೆ ಸಂಬಂಧಿಸಿದಂತೆ ಹಿಂಸಾಚಾರ ಮತ್ತು ರಾಜ್ಯದ ಕೋವಿಡ್ ಸುರಕ್ಷಾ ಕಾಯ್ದೆಯನ್ನು ಉಲ್ಲಂಘಿಸಿರುವ ದೂರನ್ನು ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸುಮಾರು 18 ಮಂದಿಯನ್ನು ಬಂಧಿಸಲಾಗಿದೆ.
ಗುರುದ್ವಾರದಲ್ಲಿ ನಡೆದ ಹಿಂಸಾಚಾರದ ಘಟನೆಯ ವೀಡಿಯೊ ಆನ್ ಲೈನ್ ನಲ್ಲಿ ಭರ್ಜರಿಯಾಗಿ ಶೇರ್ ಆಗಿದ್ದು, ಬೃಹತ್ ಪ್ರಮಾಣದಲ್ಲಿ ಗುರುದ್ವಾರದೊಳಗೆ ಸೇರಿದ್ದ ಸಿಖ್ ಗುಂಪು ಖಡ್ಗದೊಂದಿಗೆ ಬ್ಯಾರಿಕೇಡ್ ದೂಡಿ ಪೊಲೀಸರ ಮೇಲೆ ದಾಳಿ ನಡೆಸಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಅಲ್ಲದೇ ಪೊಲೀಸರ ವಾಹನಗಳನ್ನು ಉದ್ರಿಕ್ತ ಗುಂಪು ಜಖಂಗೊಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್